Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...