Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...