Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...