Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...