Homeಕರೋನಾ ತಲ್ಲಣಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

ಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

- Advertisement -
- Advertisement -

ಆಸ್ಪತ್ರೆಗಳಿಗೆ ದಾಖಲಾಗುವ ಬಡ ಅಥವಾ ಸಾಮಾನ್ಯ ವಿಭಾಗದ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಬಾಂಬೆ ಹೈಕೊರ್ಟ್ ಅಭಿಪ್ರಾಯಪಟ್ಟಿದೆ.

ಕೆ ಜೆ ಸೋಮಯ್ಯ ಆಸ್ಪತ್ರೆಯಿಂದ ಏಪ್ರಿಲ್ 11 ಮತ್ತು ಏಪ್ರಿಲ್ 28 ರ ನಡುವೆ ಕೊರೊನಾ ಚಿಕಿತ್ಸೆಗಾಗಿ 12.5 ಲಕ್ಷ ಶುಲ್ಕ ವಿಧಿಸಲಾಗಿದ್ದ ಬಾಂದ್ರಾದಲ್ಲಿನ ಕೊಳೆಗೇರಿ ಪುನರ್ವಸತಿ ಕಟ್ಟಡದ ಏಳು ನಿವಾಸಿಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸುತ್ತಿತ್ತು.

ಬಿಲ್ಲು ಪಾವತಿಸಲು ವಿಫಲವಾದರೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಿಲ್ಲ ಎಂದು ಹೆದರಿಸಿರುವುದರಿಂದ ಆಸ್ಪತ್ರೆಯೂ ಕೇಳಿದ್ದ 12.5 ಲಕ್ಷ ರುಪಾಯಿಗಳಲ್ಲಿ 10 ಲಕ್ಷ ರುಪಾಯಿಗಳನ್ನು ಸಾಲಮಾಡಿ ಪಾವತಿ ಮಾಡಿದ್ದರು ಎಂದು ಅರ್ಜಿದಾರರ ವಕೀಲರಾಗಿರುವ ವಿವೇಕ್ ಶುಕ್ಲ ಕೋರ್ಟ್‌ಗೆ ಮಾಹಿತಿ ನೀಡಿದರು. ಅದಕ್ಕಾಗಿ ನ್ಯಾಯಮೂರ್ತಿಗಳಾದ ರಮೇಶ್ ಧನುಕಾ ಮತ್ತು ಮಾಧವ್ ಜಮ್ದಾರ್ ಅವರ ನ್ಯಾಯಪೀಠವು 10 ಲಕ್ಷ ರುಪಾಯಿಯನ್ನು ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಆಸ್ಪತ್ರೆಗೆ ನಿರ್ದೇಶಿಸಿತು.

ಮನವಿಯಲ್ಲಿ, ಬಳಕೆಯಾಗದ ಪಿಪಿಇ ಕಿಟ್‌ಗಳು ಹಾಗೂ ಸೇವೆಗಳಿಗೆ ಅರ್ಜಿದಾರರಿಗೆ ಶುಲ್ಕ ವಿಧಿಸಲಾಗಿದೆ ಎಂದು ಆರೋಪಿಸಲಾಗಿದೆ.

ಜೂನ್ 13 ರಂದು ನ್ಯಾಯಾಲಯವು ರಾಜ್ಯ ದತ್ತಿ ಆಯುಕ್ತರಿಗೆ ಆಸ್ಪತ್ರೆಯು ಬಡ ಮತ್ತು ಇತರ ರೋಗಿಗಳಿಗೆ 20% ಹಾಸಿಗೆಗಳನ್ನು ಕಾಯ್ದಿರಿಸಿದೆ ಮತ್ತು ಅವರಿಗೆ ಉಚಿತ ಅಥವಾ ಸಬ್ಸಿಡಿ ಚಿಕಿತ್ಸೆಯನ್ನು ನೀಡಿದೆಯೇ ಎಂದು ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಆಸ್ಪತ್ರೆಯು ಅಂತಹ ಹಾಸಿಗೆಗಳನ್ನು ಕಾಯ್ದಿರಿಸಿದ್ದರೂ, ಲಾಕ್‌ಡೌನ್‌ನಿಂದಾಗಿ ಕೇವಲ ಮೂರು ಬಡ ವ್ಯಕ್ತಿಗಳಿಗೆ ಮಾತ್ರ ಚಿಕಿತ್ಸೆ ನೀಡಿದೆ ಎಂದು ಕಳೆದ ವಾರ ಜಂಟಿ ದತ್ತಿ ಆಯುಕ್ತರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಾಂಕ್ರಮಿಕದಂತಹ ಈ ಸಮಯದಲ್ಲಿ ಬಡ ರೋಗಿಗಳಿಗೆ ಮೀಸಲಿಟ್ಟಿದ್ದ 90 ಹಾಸಿಗೆಗೆಳಲ್ಲಿ ಕೇವಲ ಮೂವರು ಬಡ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗಿದೆ ಎಂಬುವುದನ್ನು ಒಪ್ಪಲಾಗದು ಎಂದು ಶುಕ್ಲಾ ಹೇಳಿದ್ದಾರೆ.

ತೊಂದರೆಯಲ್ಲಿರುವ ಕೊರೊನಾ ರೋಗಿಗಳ ಆದಾಯ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಅವರು ವಾದಿಸಿದ್ದರು.


ಓದಿ: ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...