Homeಕರೋನಾ ತಲ್ಲಣಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

ಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

- Advertisement -
- Advertisement -

ಆಸ್ಪತ್ರೆಗಳಿಗೆ ದಾಖಲಾಗುವ ಬಡ ಅಥವಾ ಸಾಮಾನ್ಯ ವಿಭಾಗದ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಬಾಂಬೆ ಹೈಕೊರ್ಟ್ ಅಭಿಪ್ರಾಯಪಟ್ಟಿದೆ.

ಕೆ ಜೆ ಸೋಮಯ್ಯ ಆಸ್ಪತ್ರೆಯಿಂದ ಏಪ್ರಿಲ್ 11 ಮತ್ತು ಏಪ್ರಿಲ್ 28 ರ ನಡುವೆ ಕೊರೊನಾ ಚಿಕಿತ್ಸೆಗಾಗಿ 12.5 ಲಕ್ಷ ಶುಲ್ಕ ವಿಧಿಸಲಾಗಿದ್ದ ಬಾಂದ್ರಾದಲ್ಲಿನ ಕೊಳೆಗೇರಿ ಪುನರ್ವಸತಿ ಕಟ್ಟಡದ ಏಳು ನಿವಾಸಿಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸುತ್ತಿತ್ತು.

ಬಿಲ್ಲು ಪಾವತಿಸಲು ವಿಫಲವಾದರೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಿಲ್ಲ ಎಂದು ಹೆದರಿಸಿರುವುದರಿಂದ ಆಸ್ಪತ್ರೆಯೂ ಕೇಳಿದ್ದ 12.5 ಲಕ್ಷ ರುಪಾಯಿಗಳಲ್ಲಿ 10 ಲಕ್ಷ ರುಪಾಯಿಗಳನ್ನು ಸಾಲಮಾಡಿ ಪಾವತಿ ಮಾಡಿದ್ದರು ಎಂದು ಅರ್ಜಿದಾರರ ವಕೀಲರಾಗಿರುವ ವಿವೇಕ್ ಶುಕ್ಲ ಕೋರ್ಟ್‌ಗೆ ಮಾಹಿತಿ ನೀಡಿದರು. ಅದಕ್ಕಾಗಿ ನ್ಯಾಯಮೂರ್ತಿಗಳಾದ ರಮೇಶ್ ಧನುಕಾ ಮತ್ತು ಮಾಧವ್ ಜಮ್ದಾರ್ ಅವರ ನ್ಯಾಯಪೀಠವು 10 ಲಕ್ಷ ರುಪಾಯಿಯನ್ನು ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಆಸ್ಪತ್ರೆಗೆ ನಿರ್ದೇಶಿಸಿತು.

ಮನವಿಯಲ್ಲಿ, ಬಳಕೆಯಾಗದ ಪಿಪಿಇ ಕಿಟ್‌ಗಳು ಹಾಗೂ ಸೇವೆಗಳಿಗೆ ಅರ್ಜಿದಾರರಿಗೆ ಶುಲ್ಕ ವಿಧಿಸಲಾಗಿದೆ ಎಂದು ಆರೋಪಿಸಲಾಗಿದೆ.

ಜೂನ್ 13 ರಂದು ನ್ಯಾಯಾಲಯವು ರಾಜ್ಯ ದತ್ತಿ ಆಯುಕ್ತರಿಗೆ ಆಸ್ಪತ್ರೆಯು ಬಡ ಮತ್ತು ಇತರ ರೋಗಿಗಳಿಗೆ 20% ಹಾಸಿಗೆಗಳನ್ನು ಕಾಯ್ದಿರಿಸಿದೆ ಮತ್ತು ಅವರಿಗೆ ಉಚಿತ ಅಥವಾ ಸಬ್ಸಿಡಿ ಚಿಕಿತ್ಸೆಯನ್ನು ನೀಡಿದೆಯೇ ಎಂದು ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಆಸ್ಪತ್ರೆಯು ಅಂತಹ ಹಾಸಿಗೆಗಳನ್ನು ಕಾಯ್ದಿರಿಸಿದ್ದರೂ, ಲಾಕ್‌ಡೌನ್‌ನಿಂದಾಗಿ ಕೇವಲ ಮೂರು ಬಡ ವ್ಯಕ್ತಿಗಳಿಗೆ ಮಾತ್ರ ಚಿಕಿತ್ಸೆ ನೀಡಿದೆ ಎಂದು ಕಳೆದ ವಾರ ಜಂಟಿ ದತ್ತಿ ಆಯುಕ್ತರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಾಂಕ್ರಮಿಕದಂತಹ ಈ ಸಮಯದಲ್ಲಿ ಬಡ ರೋಗಿಗಳಿಗೆ ಮೀಸಲಿಟ್ಟಿದ್ದ 90 ಹಾಸಿಗೆಗೆಳಲ್ಲಿ ಕೇವಲ ಮೂವರು ಬಡ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗಿದೆ ಎಂಬುವುದನ್ನು ಒಪ್ಪಲಾಗದು ಎಂದು ಶುಕ್ಲಾ ಹೇಳಿದ್ದಾರೆ.

ತೊಂದರೆಯಲ್ಲಿರುವ ಕೊರೊನಾ ರೋಗಿಗಳ ಆದಾಯ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಅವರು ವಾದಿಸಿದ್ದರು.


ಓದಿ: ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...