Homeಕರೋನಾ ತಲ್ಲಣಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

ಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

- Advertisement -
- Advertisement -

ಆಸ್ಪತ್ರೆಗಳಿಗೆ ದಾಖಲಾಗುವ ಬಡ ಅಥವಾ ಸಾಮಾನ್ಯ ವಿಭಾಗದ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಬಾಂಬೆ ಹೈಕೊರ್ಟ್ ಅಭಿಪ್ರಾಯಪಟ್ಟಿದೆ.

ಕೆ ಜೆ ಸೋಮಯ್ಯ ಆಸ್ಪತ್ರೆಯಿಂದ ಏಪ್ರಿಲ್ 11 ಮತ್ತು ಏಪ್ರಿಲ್ 28 ರ ನಡುವೆ ಕೊರೊನಾ ಚಿಕಿತ್ಸೆಗಾಗಿ 12.5 ಲಕ್ಷ ಶುಲ್ಕ ವಿಧಿಸಲಾಗಿದ್ದ ಬಾಂದ್ರಾದಲ್ಲಿನ ಕೊಳೆಗೇರಿ ಪುನರ್ವಸತಿ ಕಟ್ಟಡದ ಏಳು ನಿವಾಸಿಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸುತ್ತಿತ್ತು.

ಬಿಲ್ಲು ಪಾವತಿಸಲು ವಿಫಲವಾದರೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಿಲ್ಲ ಎಂದು ಹೆದರಿಸಿರುವುದರಿಂದ ಆಸ್ಪತ್ರೆಯೂ ಕೇಳಿದ್ದ 12.5 ಲಕ್ಷ ರುಪಾಯಿಗಳಲ್ಲಿ 10 ಲಕ್ಷ ರುಪಾಯಿಗಳನ್ನು ಸಾಲಮಾಡಿ ಪಾವತಿ ಮಾಡಿದ್ದರು ಎಂದು ಅರ್ಜಿದಾರರ ವಕೀಲರಾಗಿರುವ ವಿವೇಕ್ ಶುಕ್ಲ ಕೋರ್ಟ್‌ಗೆ ಮಾಹಿತಿ ನೀಡಿದರು. ಅದಕ್ಕಾಗಿ ನ್ಯಾಯಮೂರ್ತಿಗಳಾದ ರಮೇಶ್ ಧನುಕಾ ಮತ್ತು ಮಾಧವ್ ಜಮ್ದಾರ್ ಅವರ ನ್ಯಾಯಪೀಠವು 10 ಲಕ್ಷ ರುಪಾಯಿಯನ್ನು ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಆಸ್ಪತ್ರೆಗೆ ನಿರ್ದೇಶಿಸಿತು.

ಮನವಿಯಲ್ಲಿ, ಬಳಕೆಯಾಗದ ಪಿಪಿಇ ಕಿಟ್‌ಗಳು ಹಾಗೂ ಸೇವೆಗಳಿಗೆ ಅರ್ಜಿದಾರರಿಗೆ ಶುಲ್ಕ ವಿಧಿಸಲಾಗಿದೆ ಎಂದು ಆರೋಪಿಸಲಾಗಿದೆ.

ಜೂನ್ 13 ರಂದು ನ್ಯಾಯಾಲಯವು ರಾಜ್ಯ ದತ್ತಿ ಆಯುಕ್ತರಿಗೆ ಆಸ್ಪತ್ರೆಯು ಬಡ ಮತ್ತು ಇತರ ರೋಗಿಗಳಿಗೆ 20% ಹಾಸಿಗೆಗಳನ್ನು ಕಾಯ್ದಿರಿಸಿದೆ ಮತ್ತು ಅವರಿಗೆ ಉಚಿತ ಅಥವಾ ಸಬ್ಸಿಡಿ ಚಿಕಿತ್ಸೆಯನ್ನು ನೀಡಿದೆಯೇ ಎಂದು ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಆಸ್ಪತ್ರೆಯು ಅಂತಹ ಹಾಸಿಗೆಗಳನ್ನು ಕಾಯ್ದಿರಿಸಿದ್ದರೂ, ಲಾಕ್‌ಡೌನ್‌ನಿಂದಾಗಿ ಕೇವಲ ಮೂರು ಬಡ ವ್ಯಕ್ತಿಗಳಿಗೆ ಮಾತ್ರ ಚಿಕಿತ್ಸೆ ನೀಡಿದೆ ಎಂದು ಕಳೆದ ವಾರ ಜಂಟಿ ದತ್ತಿ ಆಯುಕ್ತರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಾಂಕ್ರಮಿಕದಂತಹ ಈ ಸಮಯದಲ್ಲಿ ಬಡ ರೋಗಿಗಳಿಗೆ ಮೀಸಲಿಟ್ಟಿದ್ದ 90 ಹಾಸಿಗೆಗೆಳಲ್ಲಿ ಕೇವಲ ಮೂವರು ಬಡ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗಿದೆ ಎಂಬುವುದನ್ನು ಒಪ್ಪಲಾಗದು ಎಂದು ಶುಕ್ಲಾ ಹೇಳಿದ್ದಾರೆ.

ತೊಂದರೆಯಲ್ಲಿರುವ ಕೊರೊನಾ ರೋಗಿಗಳ ಆದಾಯ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಅವರು ವಾದಿಸಿದ್ದರು.


ಓದಿ: ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...