Homeಅಂತರಾಷ್ಟ್ರೀಯ'ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ': ಆದೇಶ ಹಿಂಪಡೆದ ಮಣಿಪುರ ಸರ್ಕಾರ

‘ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ’: ಆದೇಶ ಹಿಂಪಡೆದ ಮಣಿಪುರ ಸರ್ಕಾರ

- Advertisement -
- Advertisement -

ಮಯನ್ಮಾರ್ ವಲಸಿಗ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯ ನೀಡಬಾರದು ಎಂದು ಮಣಿಪುರ ಸರ್ಕಾರ ನೀಡಿದ್ದ ಆದೇಶವನ್ನು ಈಗ ಹಿಂತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗಾಯಗೊಂಡ ಮಯನ್ಮಾರ್ ಪ್ರಜೆಗಳಿಗೆ ಚಿಕಿತ್ಸೆ ನೀಡಲು ಇಂಫಾಲ್‌ಗೆ ಕರೆದೊಯ್ಯುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಲೇ ಇದೆ” ಎಂದು ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಜ್ಞಾನ ಪ್ರಕಾಶ್ ಹೇಳಿದ್ದಾರೆ.

ಎಲ್ಲಾ ಜಿಲ್ಲಾ ಆಯುಕ್ತರಿಗೆ ಮಾರ್ಚ್ 26 ರಂದು ನೀಡಿದ ಪತ್ರವನ್ನು ತಪ್ಪಾಗಿ ಪರಿಗಣಿಸಲಾಗಿದೆ. ಆದ್ದರಿಂದ ತಪ್ಪು ತಿಳುವಳಿಕೆಯನ್ನು ಸರಿಪಡಿಸಲು ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಆದರೆ ಈ ಮೊದಲು, ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. “ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅವರಿಗೆ ಯಾವುದೇ ಟೆಂಟ್ ಹಾಕಬಾರದು, ಊಟದ ವ್ಯವಸ್ಥೆ ಮಾಡಬಾರದು. ಸರ್ಕಾರ ಮಾತ್ರವಲ್ಲದೇ ಯಾವುದೇ ಸಂಘಸಂಸ್ಥೆಗಳು ಸಹ ಅವರಿಗೆ ಸಹಾಯ ಮಾಡಬಾರದು. ತಾತ್ಕಾಲಿಕವಾಗಿ ಆಧಾರ್ ನೋಂದಣಿಯನ್ನು ನಿಲ್ಲಿಸಬೇಕು. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ನೆಲೆಯಲ್ಲಿ ಮಾತ್ರ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಾಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...