Homeಅಂತರಾಷ್ಟ್ರೀಯ'ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ': ಆದೇಶ ಹಿಂಪಡೆದ ಮಣಿಪುರ ಸರ್ಕಾರ

‘ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ’: ಆದೇಶ ಹಿಂಪಡೆದ ಮಣಿಪುರ ಸರ್ಕಾರ

- Advertisement -
- Advertisement -

ಮಯನ್ಮಾರ್ ವಲಸಿಗ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯ ನೀಡಬಾರದು ಎಂದು ಮಣಿಪುರ ಸರ್ಕಾರ ನೀಡಿದ್ದ ಆದೇಶವನ್ನು ಈಗ ಹಿಂತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗಾಯಗೊಂಡ ಮಯನ್ಮಾರ್ ಪ್ರಜೆಗಳಿಗೆ ಚಿಕಿತ್ಸೆ ನೀಡಲು ಇಂಫಾಲ್‌ಗೆ ಕರೆದೊಯ್ಯುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಲೇ ಇದೆ” ಎಂದು ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಜ್ಞಾನ ಪ್ರಕಾಶ್ ಹೇಳಿದ್ದಾರೆ.

ಎಲ್ಲಾ ಜಿಲ್ಲಾ ಆಯುಕ್ತರಿಗೆ ಮಾರ್ಚ್ 26 ರಂದು ನೀಡಿದ ಪತ್ರವನ್ನು ತಪ್ಪಾಗಿ ಪರಿಗಣಿಸಲಾಗಿದೆ. ಆದ್ದರಿಂದ ತಪ್ಪು ತಿಳುವಳಿಕೆಯನ್ನು ಸರಿಪಡಿಸಲು ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಆದರೆ ಈ ಮೊದಲು, ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. “ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅವರಿಗೆ ಯಾವುದೇ ಟೆಂಟ್ ಹಾಕಬಾರದು, ಊಟದ ವ್ಯವಸ್ಥೆ ಮಾಡಬಾರದು. ಸರ್ಕಾರ ಮಾತ್ರವಲ್ಲದೇ ಯಾವುದೇ ಸಂಘಸಂಸ್ಥೆಗಳು ಸಹ ಅವರಿಗೆ ಸಹಾಯ ಮಾಡಬಾರದು. ತಾತ್ಕಾಲಿಕವಾಗಿ ಆಧಾರ್ ನೋಂದಣಿಯನ್ನು ನಿಲ್ಲಿಸಬೇಕು. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ನೆಲೆಯಲ್ಲಿ ಮಾತ್ರ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಾಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...