Homeಅಂತರಾಷ್ಟ್ರೀಯ'ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ': ಆದೇಶ ಹಿಂಪಡೆದ ಮಣಿಪುರ ಸರ್ಕಾರ

‘ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ’: ಆದೇಶ ಹಿಂಪಡೆದ ಮಣಿಪುರ ಸರ್ಕಾರ

- Advertisement -
- Advertisement -

ಮಯನ್ಮಾರ್ ವಲಸಿಗ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯ ನೀಡಬಾರದು ಎಂದು ಮಣಿಪುರ ಸರ್ಕಾರ ನೀಡಿದ್ದ ಆದೇಶವನ್ನು ಈಗ ಹಿಂತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗಾಯಗೊಂಡ ಮಯನ್ಮಾರ್ ಪ್ರಜೆಗಳಿಗೆ ಚಿಕಿತ್ಸೆ ನೀಡಲು ಇಂಫಾಲ್‌ಗೆ ಕರೆದೊಯ್ಯುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಲೇ ಇದೆ” ಎಂದು ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಜ್ಞಾನ ಪ್ರಕಾಶ್ ಹೇಳಿದ್ದಾರೆ.

ಎಲ್ಲಾ ಜಿಲ್ಲಾ ಆಯುಕ್ತರಿಗೆ ಮಾರ್ಚ್ 26 ರಂದು ನೀಡಿದ ಪತ್ರವನ್ನು ತಪ್ಪಾಗಿ ಪರಿಗಣಿಸಲಾಗಿದೆ. ಆದ್ದರಿಂದ ತಪ್ಪು ತಿಳುವಳಿಕೆಯನ್ನು ಸರಿಪಡಿಸಲು ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಆದರೆ ಈ ಮೊದಲು, ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. “ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅವರಿಗೆ ಯಾವುದೇ ಟೆಂಟ್ ಹಾಕಬಾರದು, ಊಟದ ವ್ಯವಸ್ಥೆ ಮಾಡಬಾರದು. ಸರ್ಕಾರ ಮಾತ್ರವಲ್ಲದೇ ಯಾವುದೇ ಸಂಘಸಂಸ್ಥೆಗಳು ಸಹ ಅವರಿಗೆ ಸಹಾಯ ಮಾಡಬಾರದು. ತಾತ್ಕಾಲಿಕವಾಗಿ ಆಧಾರ್ ನೋಂದಣಿಯನ್ನು ನಿಲ್ಲಿಸಬೇಕು. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ನೆಲೆಯಲ್ಲಿ ಮಾತ್ರ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಾಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...