Homeಮುಖಪುಟನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

ನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

- Advertisement -
- Advertisement -

ತನ್ನ ಮೇಲಿನ ದ್ವೇಷಕ್ಕೆ ರಾಜ್ಯದ ವಿಧಾನಸಭಾ ಚುಣಾವಣೆಯಲ್ಲಿ ಅತ್ಯಂತ ದೊಡ್ಡ ಶತ್ರು ಬಿಜೆಪಿಗೆ ದಾರಿ ಮಾಡಿ ಕೊಡಬೇಡಿ ಎಂದು ಟಿಎಂಸಿಯು ಶನಿವಾರ ಎಡಪಂಥೀಯ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮನವಿ ಮಾಡಿದೆ. ಆದರೆ, ಎಡ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಈ ಮನವಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಟಿಎಂಸಿಯನ್ನು ಪಶ್ಚಿಮ ಬಂಗಾಳದ ಬಿಜೆಪಿಯ “ಬಿ ತಂಡ” ಎಂದು ಕರೆದಿದೆ.

ಟಿಎಂಸಿ ಕಳೆದೊಂದು ತಿಂಗಳಲ್ಲಿ ಇದು ಎರಡನೆ ಬಾರಿಗೆ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಲ್ಲಿ ಹೋರಾಟ ನಡೆಸುವಂತೆ ಎಡ ಮತ್ತು ಕಾಂಗ್ರೆಸ್ ಗೆ ಮನವಿ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ಬಿಜೆಪಿಯು ಟಿಎಂಸಿ ಮಾಡಿರುವ ಮನವಿಯ ಬಗ್ಗೆ, ರಾಜ್ಯದಲ್ಲಿ ತೃಣಮೂಲಕ್ಕೆ ಪರ್ಯಾಯವಾಗಿ ಬಿಜೆಪಿ ಮಾತ್ರ ಇದೆ ಎಂದು ಈ ಮನವಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

294 ಸದಸ್ಯ ಬಲವಿರುವ ರಾಜ್ಯ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

“ಎಡಪಂಥೀಯ ಮತ್ತು ಕಾಂಗ್ರೆಸ್ ಪಕ್ಷಗಳು ನಿಜವಾದ ಬಿಜೆಪಿ ವಿರೋಧಿಗಳಾಗಿದ್ದರೆ ಅವರು ಬಿಜೆಪಿಯ ಕೋಮು ಮತ್ತು ವಿಭಜಕ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ನಿಲ್ಲಬೇಕು” ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಯನ್ನು ವಿರೋಧಿಸುತ್ತಾ ಅವರು ಬಂಗಾಳದ ದೊಡ್ಡ ಶತ್ರು ಬಿಜೆಪಿಯನ್ನು ಆಹ್ವಾನಿಸುವ ತಪ್ಪನ್ನು ಮಾಡಬಾರದು. ಅವರು ತ್ರಿಪುರದ ಪರಿಸ್ಥಿತಿಯನ್ನು ಗಮನಿಸಿ ಏನು ಮಾಡಬೇಕೆಂದು ನಿರ್ಧರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಟಿಎಂಸಿಯ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನನ್ ಅವರು ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆಗೆ ಟಿಎಂಸಿಯೆ ಕಾರಣ ಎಂದು ದೂಷಿಸಿದ್ದಾರೆ.

“ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಲು ನಮಗೆ ಆಸಕ್ತಿಯಿಲ್ಲ. ಕಳೆದ 10 ವರ್ಷಗಳಿಂದ ನಮ್ಮ ಶಾಸಕರನ್ನು ಬೇಟೆಯಾಡಿದ ಟಿಎಂಸಿ, ಈಗ ಮೈತ್ರಿ ಮಾಡಿಕೊಳ್ಳಲು ಯಾಕೆ ಆಸಕ್ತಿ ವಹಿಸುತ್ತಿದೆ? ಮಮತಾ ಬ್ಯಾನರ್ಜಿ ಅವರಿಂದಾಗಿಯೆ ಬಂಗಾಳದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಮಾತನಾಡಿ, ಬಿಜೆಪಿ ಮತ್ತು ಟಿಎಂಸಿ ಎರಡೂ ಎಡ ಮತ್ತು ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ನಗಣ್ಯ ರಾಜಕೀಯ ಶಕ್ತಿ ಎಂದು ಬ್ರಾಂಡ್ ಮಾಡಿ ಈ  ಅದೇ ಪಕ್ಷಗಳ ಮತವನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಟಿಎಂಸಿ ಮತ್ತು ಬಿಜೆಪಿ ಎರಡೂ ಈಗ ಎಡಪಂಥೀಯರನ್ನು ಹೊಗಳುತ್ತಾ ನಮ್ಮ ಬೆಂಬಲವನ್ನು ಬಯಸುತ್ತಿವೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿಯು ಟಿಎಂಸಿ ಮತ್ತು ಬಿಜೆಪಿ ಎರಡನ್ನೂ ಸೋಲಿಸುತ್ತದೆ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ಬಿಜೆಪಿ ವಿರುದ್ಧ ಸ್ವತಃ ಹೋರಾಡಲು ಸಾಧ್ಯವಿಲ್ಲ ಎಂದು ಈ ಮನವಿಯು ಸಾಬೀತುಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ. “ಇದು ಟಿಎಂಸಿಯ ಹತಾಶೆಯನ್ನು ಸಹ ಸಾಬೀತುಪಡಿಸುತ್ತದೆ, ಅವರು ನಮ್ಮ ವಿರುದ್ಧ ತಾವಾಗಿಯೇ ಹೋರಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಇತರ ಪಕ್ಷಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಟಿಎಂಸಿಗೆ ಬಿಜೆಪಿ ಮಾತ್ರ ಪರ್ಯಾಯವಾಗಿದೆ ಎಂದು ಇದು ಸಾಬೀತುಪಡಿಸುತ್ತದೆ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...