Homeಮುಖಪುಟನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

ನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

- Advertisement -
- Advertisement -

ತನ್ನ ಮೇಲಿನ ದ್ವೇಷಕ್ಕೆ ರಾಜ್ಯದ ವಿಧಾನಸಭಾ ಚುಣಾವಣೆಯಲ್ಲಿ ಅತ್ಯಂತ ದೊಡ್ಡ ಶತ್ರು ಬಿಜೆಪಿಗೆ ದಾರಿ ಮಾಡಿ ಕೊಡಬೇಡಿ ಎಂದು ಟಿಎಂಸಿಯು ಶನಿವಾರ ಎಡಪಂಥೀಯ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮನವಿ ಮಾಡಿದೆ. ಆದರೆ, ಎಡ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಈ ಮನವಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಟಿಎಂಸಿಯನ್ನು ಪಶ್ಚಿಮ ಬಂಗಾಳದ ಬಿಜೆಪಿಯ “ಬಿ ತಂಡ” ಎಂದು ಕರೆದಿದೆ.

ಟಿಎಂಸಿ ಕಳೆದೊಂದು ತಿಂಗಳಲ್ಲಿ ಇದು ಎರಡನೆ ಬಾರಿಗೆ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಲ್ಲಿ ಹೋರಾಟ ನಡೆಸುವಂತೆ ಎಡ ಮತ್ತು ಕಾಂಗ್ರೆಸ್ ಗೆ ಮನವಿ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ಬಿಜೆಪಿಯು ಟಿಎಂಸಿ ಮಾಡಿರುವ ಮನವಿಯ ಬಗ್ಗೆ, ರಾಜ್ಯದಲ್ಲಿ ತೃಣಮೂಲಕ್ಕೆ ಪರ್ಯಾಯವಾಗಿ ಬಿಜೆಪಿ ಮಾತ್ರ ಇದೆ ಎಂದು ಈ ಮನವಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

294 ಸದಸ್ಯ ಬಲವಿರುವ ರಾಜ್ಯ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

“ಎಡಪಂಥೀಯ ಮತ್ತು ಕಾಂಗ್ರೆಸ್ ಪಕ್ಷಗಳು ನಿಜವಾದ ಬಿಜೆಪಿ ವಿರೋಧಿಗಳಾಗಿದ್ದರೆ ಅವರು ಬಿಜೆಪಿಯ ಕೋಮು ಮತ್ತು ವಿಭಜಕ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ನಿಲ್ಲಬೇಕು” ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಯನ್ನು ವಿರೋಧಿಸುತ್ತಾ ಅವರು ಬಂಗಾಳದ ದೊಡ್ಡ ಶತ್ರು ಬಿಜೆಪಿಯನ್ನು ಆಹ್ವಾನಿಸುವ ತಪ್ಪನ್ನು ಮಾಡಬಾರದು. ಅವರು ತ್ರಿಪುರದ ಪರಿಸ್ಥಿತಿಯನ್ನು ಗಮನಿಸಿ ಏನು ಮಾಡಬೇಕೆಂದು ನಿರ್ಧರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಟಿಎಂಸಿಯ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನನ್ ಅವರು ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆಗೆ ಟಿಎಂಸಿಯೆ ಕಾರಣ ಎಂದು ದೂಷಿಸಿದ್ದಾರೆ.

“ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಲು ನಮಗೆ ಆಸಕ್ತಿಯಿಲ್ಲ. ಕಳೆದ 10 ವರ್ಷಗಳಿಂದ ನಮ್ಮ ಶಾಸಕರನ್ನು ಬೇಟೆಯಾಡಿದ ಟಿಎಂಸಿ, ಈಗ ಮೈತ್ರಿ ಮಾಡಿಕೊಳ್ಳಲು ಯಾಕೆ ಆಸಕ್ತಿ ವಹಿಸುತ್ತಿದೆ? ಮಮತಾ ಬ್ಯಾನರ್ಜಿ ಅವರಿಂದಾಗಿಯೆ ಬಂಗಾಳದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಮಾತನಾಡಿ, ಬಿಜೆಪಿ ಮತ್ತು ಟಿಎಂಸಿ ಎರಡೂ ಎಡ ಮತ್ತು ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ನಗಣ್ಯ ರಾಜಕೀಯ ಶಕ್ತಿ ಎಂದು ಬ್ರಾಂಡ್ ಮಾಡಿ ಈ  ಅದೇ ಪಕ್ಷಗಳ ಮತವನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಟಿಎಂಸಿ ಮತ್ತು ಬಿಜೆಪಿ ಎರಡೂ ಈಗ ಎಡಪಂಥೀಯರನ್ನು ಹೊಗಳುತ್ತಾ ನಮ್ಮ ಬೆಂಬಲವನ್ನು ಬಯಸುತ್ತಿವೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿಯು ಟಿಎಂಸಿ ಮತ್ತು ಬಿಜೆಪಿ ಎರಡನ್ನೂ ಸೋಲಿಸುತ್ತದೆ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ಬಿಜೆಪಿ ವಿರುದ್ಧ ಸ್ವತಃ ಹೋರಾಡಲು ಸಾಧ್ಯವಿಲ್ಲ ಎಂದು ಈ ಮನವಿಯು ಸಾಬೀತುಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ. “ಇದು ಟಿಎಂಸಿಯ ಹತಾಶೆಯನ್ನು ಸಹ ಸಾಬೀತುಪಡಿಸುತ್ತದೆ, ಅವರು ನಮ್ಮ ವಿರುದ್ಧ ತಾವಾಗಿಯೇ ಹೋರಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಇತರ ಪಕ್ಷಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಟಿಎಂಸಿಗೆ ಬಿಜೆಪಿ ಮಾತ್ರ ಪರ್ಯಾಯವಾಗಿದೆ ಎಂದು ಇದು ಸಾಬೀತುಪಡಿಸುತ್ತದೆ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...