Homeಮುಖಪುಟನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

ನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

- Advertisement -
- Advertisement -

ತನ್ನ ಮೇಲಿನ ದ್ವೇಷಕ್ಕೆ ರಾಜ್ಯದ ವಿಧಾನಸಭಾ ಚುಣಾವಣೆಯಲ್ಲಿ ಅತ್ಯಂತ ದೊಡ್ಡ ಶತ್ರು ಬಿಜೆಪಿಗೆ ದಾರಿ ಮಾಡಿ ಕೊಡಬೇಡಿ ಎಂದು ಟಿಎಂಸಿಯು ಶನಿವಾರ ಎಡಪಂಥೀಯ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮನವಿ ಮಾಡಿದೆ. ಆದರೆ, ಎಡ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಈ ಮನವಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಟಿಎಂಸಿಯನ್ನು ಪಶ್ಚಿಮ ಬಂಗಾಳದ ಬಿಜೆಪಿಯ “ಬಿ ತಂಡ” ಎಂದು ಕರೆದಿದೆ.

ಟಿಎಂಸಿ ಕಳೆದೊಂದು ತಿಂಗಳಲ್ಲಿ ಇದು ಎರಡನೆ ಬಾರಿಗೆ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಲ್ಲಿ ಹೋರಾಟ ನಡೆಸುವಂತೆ ಎಡ ಮತ್ತು ಕಾಂಗ್ರೆಸ್ ಗೆ ಮನವಿ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ಬಿಜೆಪಿಯು ಟಿಎಂಸಿ ಮಾಡಿರುವ ಮನವಿಯ ಬಗ್ಗೆ, ರಾಜ್ಯದಲ್ಲಿ ತೃಣಮೂಲಕ್ಕೆ ಪರ್ಯಾಯವಾಗಿ ಬಿಜೆಪಿ ಮಾತ್ರ ಇದೆ ಎಂದು ಈ ಮನವಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

294 ಸದಸ್ಯ ಬಲವಿರುವ ರಾಜ್ಯ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

“ಎಡಪಂಥೀಯ ಮತ್ತು ಕಾಂಗ್ರೆಸ್ ಪಕ್ಷಗಳು ನಿಜವಾದ ಬಿಜೆಪಿ ವಿರೋಧಿಗಳಾಗಿದ್ದರೆ ಅವರು ಬಿಜೆಪಿಯ ಕೋಮು ಮತ್ತು ವಿಭಜಕ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ನಿಲ್ಲಬೇಕು” ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಯನ್ನು ವಿರೋಧಿಸುತ್ತಾ ಅವರು ಬಂಗಾಳದ ದೊಡ್ಡ ಶತ್ರು ಬಿಜೆಪಿಯನ್ನು ಆಹ್ವಾನಿಸುವ ತಪ್ಪನ್ನು ಮಾಡಬಾರದು. ಅವರು ತ್ರಿಪುರದ ಪರಿಸ್ಥಿತಿಯನ್ನು ಗಮನಿಸಿ ಏನು ಮಾಡಬೇಕೆಂದು ನಿರ್ಧರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಟಿಎಂಸಿಯ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನನ್ ಅವರು ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆಗೆ ಟಿಎಂಸಿಯೆ ಕಾರಣ ಎಂದು ದೂಷಿಸಿದ್ದಾರೆ.

“ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಲು ನಮಗೆ ಆಸಕ್ತಿಯಿಲ್ಲ. ಕಳೆದ 10 ವರ್ಷಗಳಿಂದ ನಮ್ಮ ಶಾಸಕರನ್ನು ಬೇಟೆಯಾಡಿದ ಟಿಎಂಸಿ, ಈಗ ಮೈತ್ರಿ ಮಾಡಿಕೊಳ್ಳಲು ಯಾಕೆ ಆಸಕ್ತಿ ವಹಿಸುತ್ತಿದೆ? ಮಮತಾ ಬ್ಯಾನರ್ಜಿ ಅವರಿಂದಾಗಿಯೆ ಬಂಗಾಳದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಮಾತನಾಡಿ, ಬಿಜೆಪಿ ಮತ್ತು ಟಿಎಂಸಿ ಎರಡೂ ಎಡ ಮತ್ತು ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ನಗಣ್ಯ ರಾಜಕೀಯ ಶಕ್ತಿ ಎಂದು ಬ್ರಾಂಡ್ ಮಾಡಿ ಈ  ಅದೇ ಪಕ್ಷಗಳ ಮತವನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಟಿಎಂಸಿ ಮತ್ತು ಬಿಜೆಪಿ ಎರಡೂ ಈಗ ಎಡಪಂಥೀಯರನ್ನು ಹೊಗಳುತ್ತಾ ನಮ್ಮ ಬೆಂಬಲವನ್ನು ಬಯಸುತ್ತಿವೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿಯು ಟಿಎಂಸಿ ಮತ್ತು ಬಿಜೆಪಿ ಎರಡನ್ನೂ ಸೋಲಿಸುತ್ತದೆ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ಬಿಜೆಪಿ ವಿರುದ್ಧ ಸ್ವತಃ ಹೋರಾಡಲು ಸಾಧ್ಯವಿಲ್ಲ ಎಂದು ಈ ಮನವಿಯು ಸಾಬೀತುಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ. “ಇದು ಟಿಎಂಸಿಯ ಹತಾಶೆಯನ್ನು ಸಹ ಸಾಬೀತುಪಡಿಸುತ್ತದೆ, ಅವರು ನಮ್ಮ ವಿರುದ್ಧ ತಾವಾಗಿಯೇ ಹೋರಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಇತರ ಪಕ್ಷಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಟಿಎಂಸಿಗೆ ಬಿಜೆಪಿ ಮಾತ್ರ ಪರ್ಯಾಯವಾಗಿದೆ ಎಂದು ಇದು ಸಾಬೀತುಪಡಿಸುತ್ತದೆ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...