Homeಮುಖಪುಟನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

ನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

- Advertisement -
- Advertisement -

ತನ್ನ ಮೇಲಿನ ದ್ವೇಷಕ್ಕೆ ರಾಜ್ಯದ ವಿಧಾನಸಭಾ ಚುಣಾವಣೆಯಲ್ಲಿ ಅತ್ಯಂತ ದೊಡ್ಡ ಶತ್ರು ಬಿಜೆಪಿಗೆ ದಾರಿ ಮಾಡಿ ಕೊಡಬೇಡಿ ಎಂದು ಟಿಎಂಸಿಯು ಶನಿವಾರ ಎಡಪಂಥೀಯ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮನವಿ ಮಾಡಿದೆ. ಆದರೆ, ಎಡ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಈ ಮನವಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಟಿಎಂಸಿಯನ್ನು ಪಶ್ಚಿಮ ಬಂಗಾಳದ ಬಿಜೆಪಿಯ “ಬಿ ತಂಡ” ಎಂದು ಕರೆದಿದೆ.

ಟಿಎಂಸಿ ಕಳೆದೊಂದು ತಿಂಗಳಲ್ಲಿ ಇದು ಎರಡನೆ ಬಾರಿಗೆ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಲ್ಲಿ ಹೋರಾಟ ನಡೆಸುವಂತೆ ಎಡ ಮತ್ತು ಕಾಂಗ್ರೆಸ್ ಗೆ ಮನವಿ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ಬಿಜೆಪಿಯು ಟಿಎಂಸಿ ಮಾಡಿರುವ ಮನವಿಯ ಬಗ್ಗೆ, ರಾಜ್ಯದಲ್ಲಿ ತೃಣಮೂಲಕ್ಕೆ ಪರ್ಯಾಯವಾಗಿ ಬಿಜೆಪಿ ಮಾತ್ರ ಇದೆ ಎಂದು ಈ ಮನವಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

294 ಸದಸ್ಯ ಬಲವಿರುವ ರಾಜ್ಯ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

“ಎಡಪಂಥೀಯ ಮತ್ತು ಕಾಂಗ್ರೆಸ್ ಪಕ್ಷಗಳು ನಿಜವಾದ ಬಿಜೆಪಿ ವಿರೋಧಿಗಳಾಗಿದ್ದರೆ ಅವರು ಬಿಜೆಪಿಯ ಕೋಮು ಮತ್ತು ವಿಭಜಕ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ನಿಲ್ಲಬೇಕು” ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಯನ್ನು ವಿರೋಧಿಸುತ್ತಾ ಅವರು ಬಂಗಾಳದ ದೊಡ್ಡ ಶತ್ರು ಬಿಜೆಪಿಯನ್ನು ಆಹ್ವಾನಿಸುವ ತಪ್ಪನ್ನು ಮಾಡಬಾರದು. ಅವರು ತ್ರಿಪುರದ ಪರಿಸ್ಥಿತಿಯನ್ನು ಗಮನಿಸಿ ಏನು ಮಾಡಬೇಕೆಂದು ನಿರ್ಧರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಟಿಎಂಸಿಯ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನನ್ ಅವರು ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆಗೆ ಟಿಎಂಸಿಯೆ ಕಾರಣ ಎಂದು ದೂಷಿಸಿದ್ದಾರೆ.

“ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಲು ನಮಗೆ ಆಸಕ್ತಿಯಿಲ್ಲ. ಕಳೆದ 10 ವರ್ಷಗಳಿಂದ ನಮ್ಮ ಶಾಸಕರನ್ನು ಬೇಟೆಯಾಡಿದ ಟಿಎಂಸಿ, ಈಗ ಮೈತ್ರಿ ಮಾಡಿಕೊಳ್ಳಲು ಯಾಕೆ ಆಸಕ್ತಿ ವಹಿಸುತ್ತಿದೆ? ಮಮತಾ ಬ್ಯಾನರ್ಜಿ ಅವರಿಂದಾಗಿಯೆ ಬಂಗಾಳದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಮಾತನಾಡಿ, ಬಿಜೆಪಿ ಮತ್ತು ಟಿಎಂಸಿ ಎರಡೂ ಎಡ ಮತ್ತು ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ನಗಣ್ಯ ರಾಜಕೀಯ ಶಕ್ತಿ ಎಂದು ಬ್ರಾಂಡ್ ಮಾಡಿ ಈ  ಅದೇ ಪಕ್ಷಗಳ ಮತವನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಟಿಎಂಸಿ ಮತ್ತು ಬಿಜೆಪಿ ಎರಡೂ ಈಗ ಎಡಪಂಥೀಯರನ್ನು ಹೊಗಳುತ್ತಾ ನಮ್ಮ ಬೆಂಬಲವನ್ನು ಬಯಸುತ್ತಿವೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿಯು ಟಿಎಂಸಿ ಮತ್ತು ಬಿಜೆಪಿ ಎರಡನ್ನೂ ಸೋಲಿಸುತ್ತದೆ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ಬಿಜೆಪಿ ವಿರುದ್ಧ ಸ್ವತಃ ಹೋರಾಡಲು ಸಾಧ್ಯವಿಲ್ಲ ಎಂದು ಈ ಮನವಿಯು ಸಾಬೀತುಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ. “ಇದು ಟಿಎಂಸಿಯ ಹತಾಶೆಯನ್ನು ಸಹ ಸಾಬೀತುಪಡಿಸುತ್ತದೆ, ಅವರು ನಮ್ಮ ವಿರುದ್ಧ ತಾವಾಗಿಯೇ ಹೋರಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಇತರ ಪಕ್ಷಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಟಿಎಂಸಿಗೆ ಬಿಜೆಪಿ ಮಾತ್ರ ಪರ್ಯಾಯವಾಗಿದೆ ಎಂದು ಇದು ಸಾಬೀತುಪಡಿಸುತ್ತದೆ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...