Homeಮುಖಪುಟನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

ನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

- Advertisement -
- Advertisement -

ತನ್ನ ಮೇಲಿನ ದ್ವೇಷಕ್ಕೆ ರಾಜ್ಯದ ವಿಧಾನಸಭಾ ಚುಣಾವಣೆಯಲ್ಲಿ ಅತ್ಯಂತ ದೊಡ್ಡ ಶತ್ರು ಬಿಜೆಪಿಗೆ ದಾರಿ ಮಾಡಿ ಕೊಡಬೇಡಿ ಎಂದು ಟಿಎಂಸಿಯು ಶನಿವಾರ ಎಡಪಂಥೀಯ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮನವಿ ಮಾಡಿದೆ. ಆದರೆ, ಎಡ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಈ ಮನವಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಟಿಎಂಸಿಯನ್ನು ಪಶ್ಚಿಮ ಬಂಗಾಳದ ಬಿಜೆಪಿಯ “ಬಿ ತಂಡ” ಎಂದು ಕರೆದಿದೆ.

ಟಿಎಂಸಿ ಕಳೆದೊಂದು ತಿಂಗಳಲ್ಲಿ ಇದು ಎರಡನೆ ಬಾರಿಗೆ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಲ್ಲಿ ಹೋರಾಟ ನಡೆಸುವಂತೆ ಎಡ ಮತ್ತು ಕಾಂಗ್ರೆಸ್ ಗೆ ಮನವಿ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ಬಿಜೆಪಿಯು ಟಿಎಂಸಿ ಮಾಡಿರುವ ಮನವಿಯ ಬಗ್ಗೆ, ರಾಜ್ಯದಲ್ಲಿ ತೃಣಮೂಲಕ್ಕೆ ಪರ್ಯಾಯವಾಗಿ ಬಿಜೆಪಿ ಮಾತ್ರ ಇದೆ ಎಂದು ಈ ಮನವಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

294 ಸದಸ್ಯ ಬಲವಿರುವ ರಾಜ್ಯ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

“ಎಡಪಂಥೀಯ ಮತ್ತು ಕಾಂಗ್ರೆಸ್ ಪಕ್ಷಗಳು ನಿಜವಾದ ಬಿಜೆಪಿ ವಿರೋಧಿಗಳಾಗಿದ್ದರೆ ಅವರು ಬಿಜೆಪಿಯ ಕೋಮು ಮತ್ತು ವಿಭಜಕ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ನಿಲ್ಲಬೇಕು” ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಯನ್ನು ವಿರೋಧಿಸುತ್ತಾ ಅವರು ಬಂಗಾಳದ ದೊಡ್ಡ ಶತ್ರು ಬಿಜೆಪಿಯನ್ನು ಆಹ್ವಾನಿಸುವ ತಪ್ಪನ್ನು ಮಾಡಬಾರದು. ಅವರು ತ್ರಿಪುರದ ಪರಿಸ್ಥಿತಿಯನ್ನು ಗಮನಿಸಿ ಏನು ಮಾಡಬೇಕೆಂದು ನಿರ್ಧರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಟಿಎಂಸಿಯ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನನ್ ಅವರು ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆಗೆ ಟಿಎಂಸಿಯೆ ಕಾರಣ ಎಂದು ದೂಷಿಸಿದ್ದಾರೆ.

“ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಲು ನಮಗೆ ಆಸಕ್ತಿಯಿಲ್ಲ. ಕಳೆದ 10 ವರ್ಷಗಳಿಂದ ನಮ್ಮ ಶಾಸಕರನ್ನು ಬೇಟೆಯಾಡಿದ ಟಿಎಂಸಿ, ಈಗ ಮೈತ್ರಿ ಮಾಡಿಕೊಳ್ಳಲು ಯಾಕೆ ಆಸಕ್ತಿ ವಹಿಸುತ್ತಿದೆ? ಮಮತಾ ಬ್ಯಾನರ್ಜಿ ಅವರಿಂದಾಗಿಯೆ ಬಂಗಾಳದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಮಾತನಾಡಿ, ಬಿಜೆಪಿ ಮತ್ತು ಟಿಎಂಸಿ ಎರಡೂ ಎಡ ಮತ್ತು ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ನಗಣ್ಯ ರಾಜಕೀಯ ಶಕ್ತಿ ಎಂದು ಬ್ರಾಂಡ್ ಮಾಡಿ ಈ  ಅದೇ ಪಕ್ಷಗಳ ಮತವನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಟಿಎಂಸಿ ಮತ್ತು ಬಿಜೆಪಿ ಎರಡೂ ಈಗ ಎಡಪಂಥೀಯರನ್ನು ಹೊಗಳುತ್ತಾ ನಮ್ಮ ಬೆಂಬಲವನ್ನು ಬಯಸುತ್ತಿವೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿಯು ಟಿಎಂಸಿ ಮತ್ತು ಬಿಜೆಪಿ ಎರಡನ್ನೂ ಸೋಲಿಸುತ್ತದೆ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ಬಿಜೆಪಿ ವಿರುದ್ಧ ಸ್ವತಃ ಹೋರಾಡಲು ಸಾಧ್ಯವಿಲ್ಲ ಎಂದು ಈ ಮನವಿಯು ಸಾಬೀತುಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ. “ಇದು ಟಿಎಂಸಿಯ ಹತಾಶೆಯನ್ನು ಸಹ ಸಾಬೀತುಪಡಿಸುತ್ತದೆ, ಅವರು ನಮ್ಮ ವಿರುದ್ಧ ತಾವಾಗಿಯೇ ಹೋರಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಇತರ ಪಕ್ಷಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಟಿಎಂಸಿಗೆ ಬಿಜೆಪಿ ಮಾತ್ರ ಪರ್ಯಾಯವಾಗಿದೆ ಎಂದು ಇದು ಸಾಬೀತುಪಡಿಸುತ್ತದೆ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....