Homeಮುಖಪುಟಜಾಲತಾಣದಲ್ಲಿ ಸಮಸ್ಯೆ ಬಿಚ್ಚಿಡುವ ಜನರಿಗೆ ಕಿರುಕುಳ ನೀಡದಿರಿ: ಸುಪ್ರೀಂ ಎಚ್ಚರಿಕೆ

ಜಾಲತಾಣದಲ್ಲಿ ಸಮಸ್ಯೆ ಬಿಚ್ಚಿಡುವ ಜನರಿಗೆ ಕಿರುಕುಳ ನೀಡದಿರಿ: ಸುಪ್ರೀಂ ಎಚ್ಚರಿಕೆ

ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಸರ್ಕಾರಗಳಿಗೆ ಎಚ್ಚರಿಕೆ ನೀಡಿದೆ

- Advertisement -
- Advertisement -

ಜನರು ತಮ್ಮ ಕುಂದುಕೊರತೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದರೆ ಯಾವುದೇ ರಾಜ್ಯವು ಈ ಮಾಹಿತಿಗಳನ್ನು ತಡೆಗಟ್ಟಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. “ಒಂದು ವೇಳೆ ಜನರಿಗೆ ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸುಲಾಗುತ್ತದೆ” ಎಂದು ನ್ಯಾಯಾಲವು ಒತ್ತಿ ಹೇಳಿದೆ.

“ನಾಗರಿಕನಾಗಿ ಅಥವಾ ನ್ಯಾಯಾಧೀಶನಾಗಿ ನನಗೆ ಇದು ಬಹಳ ಕಳವಳಕಾರಿ ಸಂಗತಿಯಾಗಿದೆ. ಜನರು ತಮ್ಮ ಕುಂದುಕೊರತೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದರೆ, ಅವರ ಮೇಲೆ ಬಲಪ್ರಯೋಗ ಮಾಡುವುದನ್ನು ಬಿಟ್ಟು ಅವರ ಅಳಲನ್ನು ಕೇಳೋಣ. ನಾವು ಮಾನವೀಯ ಬಿಕ್ಕಟ್ಟಿನಲ್ಲಿದ್ದೇವೆ, ಹಾಸಿಗೆ ಮತ್ತು ಆಕ್ಸಿಜನ್ ಇಲ್ಲವೆಂದು ಹೇಳಿದ ಜನರಿಗೆ ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸುತ್ತೇವೆ”ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಇಂದು ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸಹ ಹಾಸಿಗೆಗಳನ್ನು ಪಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, “ಪರಿಸ್ಥಿತಿಯು ಕಠಿಣವಾಗಿದೆ” ಎಂದು ಉಲ್ಲೇಖಿಸಿದೆ.

ಕೊರೊನಾ ಎರಡನೆ ಅಲೆಯು ದೇಶದಾದ್ಯಂತ ತೀವ್ರವಾಗಿ ಹೆಚ್ಚುತ್ತಿದೆ. ಇಂದು ದೇಶದಲ್ಲಿ 3.86 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಸೋಂಕಿನ ಎರಡನೆ ಅಲೆಯ ಬಗ್ಗೆ ತಜ್ಞರು ಬಿಜೆಪಿಯ ನರೇಂದ್ರ ಮೋದಿ ಸರ್ಕಾರವನ್ನು ಈ ಹಿಂದೆಯೆ ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಯಾವುದೆ ತಯಾರಿಗಳನ್ನು ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

“ನಾಗರಿಕರು ಅಂತರ್ಜಾಲದಲ್ಲಿ ಎತ್ತುತ್ತಿರುವ ಕುಂದುಕೊರತೆಗಳು ಸುಳ್ಳು ಎಂದು ಯಾವುದೇ ಊಹೆಯಿರಬಾರದು” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇತ್ತೀಚೆಗೆ ಉತ್ತರ ಪ್ರದೇಶದ ಸರ್ಕಾರವು ಟ್ವಿಟರ್‌ನಲ್ಲಿ ಆಕ್ಸಿಜನ್ ಬೇಕು ಎಂದು ಕೇಳಿದ್ದ ಯುವಕನ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿ ಎಫ್‌ಐಆರ್‌ ದಾಖಲಿಸಿತ್ತು. ಈ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್‌ನ ಈ ಆದೇಶವು ಮಹತ್ವದ್ದಾಗಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...