Homeಮುಖಪುಟಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು- ಮೀನಾ ಹ್ಯಾರಿಸ್

- Advertisement -
- Advertisement -

ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಇದು ಕೇವಲ ಕೃಷಿ ನೀತಿಯ ಬಗ್ಗೆ ಅಲ್ಲ. ಇದು ಧಾರ್ಮಿಕ ಅಲ್ಪಸಂಖ್ಯಾತರ ಕಿರುಕುಳದ ಬಗ್ಗೆಯೂ ಇದೆ. ಇದು ಪೊಲೀಸ್ ಹಿಂಸೆ, ಉಗ್ರಗಾಮಿ ರಾಷ್ಟ್ರೀಯತೆ ಮತ್ತು ಕಾರ್ಮಿಕ ಹಕ್ಕುಗಳ ಮೇಲಿನ ದಾಳಿ. ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು” ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಈ ಹಿಂದೆಯೂ ಮೀನಾ ಹ್ಯಾರಿಸ್ ರೈತರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.


ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇವಲ ಎಡಪಂಥೀಯ ಚಿಂತನೆಗಳು ಮಾತ್ರ ಇದರಲ್ಲಿ ಬರುತ್ತದೆ ಹೊರತು ಯಾವುದೇ ಪ್ರಯೋಜನವಿಲ್ಲ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...