Homeಮುಖಪುಟಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು- ಮೀನಾ ಹ್ಯಾರಿಸ್

- Advertisement -
- Advertisement -

ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಇದು ಕೇವಲ ಕೃಷಿ ನೀತಿಯ ಬಗ್ಗೆ ಅಲ್ಲ. ಇದು ಧಾರ್ಮಿಕ ಅಲ್ಪಸಂಖ್ಯಾತರ ಕಿರುಕುಳದ ಬಗ್ಗೆಯೂ ಇದೆ. ಇದು ಪೊಲೀಸ್ ಹಿಂಸೆ, ಉಗ್ರಗಾಮಿ ರಾಷ್ಟ್ರೀಯತೆ ಮತ್ತು ಕಾರ್ಮಿಕ ಹಕ್ಕುಗಳ ಮೇಲಿನ ದಾಳಿ. ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು” ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಈ ಹಿಂದೆಯೂ ಮೀನಾ ಹ್ಯಾರಿಸ್ ರೈತರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.


ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇವಲ ಎಡಪಂಥೀಯ ಚಿಂತನೆಗಳು ಮಾತ್ರ ಇದರಲ್ಲಿ ಬರುತ್ತದೆ ಹೊರತು ಯಾವುದೇ ಪ್ರಯೋಜನವಿಲ್ಲ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...