HomeUncategorizedಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

- Advertisement -
- Advertisement -

ಮಯನ್ಮಾರ್‌ನಿಂದ ವಲಸೆ ಬರುವ ಜನರಿಗೆ ಆಹಾರ ಒದಗಿಸಬಾರದು ಮತ್ತು ಯಾವುದೇ ಶಿಬಿರಗಳನ್ನು ತೆರೆಯಬಾರದು ಎಂದು ಮಣಿಪುರ ಸರ್ಕಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ಮಯನ್ಮಾರ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಿಲಿಟರಿ ಹಿಂಸಾಚಾರ ಭುಗಿಲೆದ್ದಿದೆ. ಹಾಗಾಗಿ ಅಲ್ಲಿನ ಜನರು ನೆರೆಯ ರಾಷ್ಟ್ರಗಳಿಗೆ ವಲಸೆ ಹೋಗುತ್ತಿದ್ದಾರೆ.

ಈ ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

“ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿದೆ.

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ಪರಿಗಣನೆಯ ಮೇಲೆ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...