HomeUncategorizedಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

- Advertisement -
- Advertisement -

ಮಯನ್ಮಾರ್‌ನಿಂದ ವಲಸೆ ಬರುವ ಜನರಿಗೆ ಆಹಾರ ಒದಗಿಸಬಾರದು ಮತ್ತು ಯಾವುದೇ ಶಿಬಿರಗಳನ್ನು ತೆರೆಯಬಾರದು ಎಂದು ಮಣಿಪುರ ಸರ್ಕಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ಮಯನ್ಮಾರ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಿಲಿಟರಿ ಹಿಂಸಾಚಾರ ಭುಗಿಲೆದ್ದಿದೆ. ಹಾಗಾಗಿ ಅಲ್ಲಿನ ಜನರು ನೆರೆಯ ರಾಷ್ಟ್ರಗಳಿಗೆ ವಲಸೆ ಹೋಗುತ್ತಿದ್ದಾರೆ.

ಈ ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

“ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿದೆ.

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ಪರಿಗಣನೆಯ ಮೇಲೆ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...