HomeUncategorizedಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

- Advertisement -
- Advertisement -

ಮಯನ್ಮಾರ್‌ನಿಂದ ವಲಸೆ ಬರುವ ಜನರಿಗೆ ಆಹಾರ ಒದಗಿಸಬಾರದು ಮತ್ತು ಯಾವುದೇ ಶಿಬಿರಗಳನ್ನು ತೆರೆಯಬಾರದು ಎಂದು ಮಣಿಪುರ ಸರ್ಕಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ಮಯನ್ಮಾರ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಿಲಿಟರಿ ಹಿಂಸಾಚಾರ ಭುಗಿಲೆದ್ದಿದೆ. ಹಾಗಾಗಿ ಅಲ್ಲಿನ ಜನರು ನೆರೆಯ ರಾಷ್ಟ್ರಗಳಿಗೆ ವಲಸೆ ಹೋಗುತ್ತಿದ್ದಾರೆ.

ಈ ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

“ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿದೆ.

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ಪರಿಗಣನೆಯ ಮೇಲೆ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...