Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...