Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...