Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...