Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...