Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...