Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...