Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...