Homeಚಳವಳಿನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ: ರೈತ ಸಂಘಟನೆ

ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ: ರೈತ ಸಂಘಟನೆ

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆಯೇ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, “ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮೊಂದಿಗೆ ಮಾತುಕತೆ ಪ್ರಾರಂಭಿಸಿ ಮತ್ತು ಬೇಡಿಕೆಗಳನ್ನು ಈಡೇರಿಸಿ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆ ಕಾನೂನು ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ ಸುಮಾರು ಆರು ತಿಂಗಳಿನಿಂದ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಸಿಂಘು, ಟಿಕ್ರಿ, ಗಾಝಿಪುರ್ ಮತ್ತು ಶಹಾಜಾನ್‌ಪುರ್‌ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ರೈತರ ಚಳವಳಿಯಲ್ಲಿ ಈವರೆಗೆ 470 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅನೇಕ ಚಳವಳಿಗಾರರು ತಮ್ಮ ಉದ್ಯೋಗ, ಶಿಕ್ಷಣ ಮತ್ತು ಇತರ ಕೆಲಸಗಳನ್ನು ತ್ಯಜಿಸಿದ್ದಾರೆ. ಸರ್ಕಾರ ತನ್ನ ಸ್ವಂತ ನಾಗರಿಕರ ಬಗ್ಗೆ ಎಷ್ಟು ಅಮಾನವೀಯತರ ಮತ್ತು ಅಸಡ್ಡೆ ಹೊಂದಿದೆ ಎಂಬುದನ್ನು ಅದರ ವರ್ತನೆ ತೋರಿಸುತ್ತದೆ. ಸರ್ಕಾರವು ತನ್ನ ರೈತರ ಬಗ್ಗೆ ಕಾಳಜಿ ವಹಿಸಿದ್ದರೆ ಮತ್ತು ಅವರ ಕಲ್ಯಾಣವನ್ನು ಬಯಸಿದ್ದರೇ, ಅದು ರೈತರೊಂದಿಗೆ ಮಾತುಕತೆಯನ್ನು ಪ್ರಾರಂಭಿಸಬೇಕು ಮತ್ತು ಅವರ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ರೈತರ ತಾಳ್ಮೆ ಪರೀಕ್ಷಿಸಬೇಡಿ “ಎಂದು ರೈತ ಸಂಘಟನೆ ಎಸ್‌ಕೆಎಂ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೇ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಇಲ್ಲಿಯವರೆಗೆ, ಪ್ರತಿಭಟನಾ ನಿರತ ರೈತರು ಮತ್ತು ಸರ್ಕಾರದ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಎರಡೂ ಕಡೆಯವರು ತಮ್ಮ ನಿಲುವಿಗೆ ಅಂಟಿಕೊಂಡಿರುವುದರಿಂದ ಮಾತುಕತೆಗಳು ಮುರಿದುಬಿದ್ದಿದ್ದು, ಪ್ರತಿಭಟನೆ ಮುಂದುವರೆದಿದೆ.

ತೌತೆ ಚಂಡಮಾರುತದ ಪರಿಣಾಮದಿಂದಾಗಿ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಸ್ಥಳಗಳಲ್ಲಿ ಭಾರಿ ಅಡ್ಡಿ ಮತ್ತು ನಷ್ಟಕ್ಕೆ ಕಾರಣವಾಗಿದೆ. “ಮಳೆಯಿಂದಾಗಿ ಆಹಾರ ಮತ್ತು ಮೂಲಸೌಕರ್ಯಗಳು ಅಸ್ತವ್ಯಸ್ತವಾಗಿದೆ. ಗಡಿಯಲ್ಲಿನ ರಸ್ತೆಗಳು ಮತ್ತು ಪ್ರತಿಭಟನಾ ಸ್ಥಳಗಳ ಹಲವಾರು ಭಾಗಗಳು ಮಳೆನೀರಿನಿಂದ ತುಂಬಿವೆ” ಎಂದು ರೈತ ಸಂಘಟನೆ ತಿಳಿಸಿದೆ.

“ಆರು ತಿಂಗಳುಗಳಿಂದ, ಯಾವುದೇ ಸರ್ಕಾರಿ ಸೌಲಭ್ಯಗಳು ಮತ್ತು ಬೆಂಬಲಗಳಿಲ್ಲದೇ, ಪ್ರತಿಭಟನಾ ನಿರತ ರೈತರು ಸ್ವತಃ ತಮ್ಮ ಮೂಲಸೌಕರ್ಯಗಳನ್ನು ನಿಭಾಯಿಸುತ್ತಿದ್ದಾರೆ” ಎಂದು ಎಸ್‌ಕೆಎಂ ಹೇಳಿದೆ.

ಜನವರಿಯಲ್ಲಿ, ವಿವಾದಿತ ಕೃಷಿ ಕಾನೂನುಗಳನ್ನು 12 ರಿಂದ 18 ತಿಂಗಳುಗಳವರೆಗೆ ಅಮಾನತುಗೊಳಿಸಲು ಸರ್ಕಾರ ಮುಂದಾಗಿತ್ತು, ಆದರೆ, ರೈತ ಸಂಘಗಳು ಸರ್ಕಾರದ ಮನವಿಯನ್ನು ತಿರಸ್ಕರಿಸಿದವು. ಕಾಯ್ದೆಗಳು ರದ್ದಾಗುವವರೆಗೆ ಹೋರಾಟ ನಡೆಸುವುದಾಗಿ ತಿಳಿಸಿವೆ. ಕಾನೂನುಗಳ ಅನುಷ್ಠಾನವನ್ನು ತಡೆಹಿಡಿದು ಬಿಕ್ಕಟ್ಟನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...