Homeಮುಖಪುಟಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿಲ್ಲ ಎಂದು ಟ್ವಿಟರ್‌ ತನ್ನ ಹೇಳಿಕೆಯಲ್ಲಿ ಹೇಳಿತ್ತು.

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ಟ್ವಿಟರ್ ನಡುವಿನ‌ ಸಂಘರ್ಷ ತಾರಕಕ್ಕೇರಿದ್ದು, ಸಾಮಾಜಿಕ ಜಾಲತಾಣ ಪ್ಲ್ಯಾಟ್‌ಫಾರ್ಮ್‌ಗಳ ಡಬಲ್ ಸ್ಟ್ಯಾಂಡರ್ಡ್ ಅನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್ ಗುರುವಾರ ಹೇಳಿದರು. “ಇದು ಟ್ವಿಟರ್, ಫೇಸ್‌ಬುಕ್, ಲಿಂಕ್ಡ್‌ಇನ್ ಅಥವಾ ವಾಟ್ಸಾಪ್ ಸೇರಿದಂತೆ ಯಾವುದೆ ಪ್ಲ್ಯಾಟ್‌ಫಾರ್ಮ್‌ಗಳು ಆಗಿರಲಿ ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಹೇಳಿದರು.

“ಭಾರತದಲ್ಲಿ ಕೆಲಸ ಮಾಡಿ. ನಿಮಗೆ ಇಲ್ಲಿ ಕೋಟಿ ಅನುಯಾಯಿಗಳಿವೆ. ಹಣ ಸಂಪಾದಿಸಿ ಆದರೆ ನೀವು ಭಾರತೀಯ ಕಾನೂನು ಮತ್ತು ಸಂವಿಧಾನವನ್ನು ಪಾಲಿಸಬೇಕಾಗುತ್ತದೆ” ಎಂದು ಸಚಿವರು ಹೇಳಿದರು.

“ನಾವು ಈಗ ಟ್ವಿಟರ್‌‌ ಜೊತೆಗಿನ ಸಮಸ್ಯೆಯನ್ನು ಎತ್ತಿದ್ದೇವೆ. ನಮ್ಮ ಇಲಾಖೆಯು ಟ್ವಿಟರ್‌ನೊಂದಿಗೆ ಮಾತುಕತೆಯಲ್ಲಿದೆ. ಅದಕ್ಕಾಗಿಯೇ ನಾನು ಈ ವಿಷಯದ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಅಮೆರಿಕದ ಕ್ಯಾಪಿಟಲ್ ಹಿಲ್‌‌‌ನಲ್ಲಿ ಹಿಂಸಾಚಾರ ನಡೆದಾಗ ಏನಾಗಿದೆ ಎಂಬ ಬಗ್ಗೆ ನಾವು ಪಶ್ನೆಗಳನ್ನು ಎತ್ತಿದ್ದೇವೆ. ಅಲ್ಲಿ ಸಾಮಾಜಿಕ ಜಾಲತಾಣದ ಫ್ಲ್ಯಾಟ್‌‌ಪಾರ್ಮ್‌ ಪೊಲೀಸ್ ತನಿಖೆಗೆ ನಿಲ್ಲುತ್ತವೆ ಆದರೆ ಕೆಂಪು ಕೋಟೆಯಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಅದೇ ಫ್ಲ್ಯಾಟ್‌‌ಫಾರ್ಮ್ ಭಾರತ ಸರ್ಕಾರದ ವಿರುದ್ಧ ನಿಲ್ಲುತ್ತಿದೆ. ಕೆಂಪು ಕೋಟೆ ನಮ್ಮ ಹೆಮ್ಮೆಯ ಸಂಕೇತವಾಗಿದೆ. ನಾವು ಈ ಡಬಲ್ ಸ್ಟ್ಯಾಂಡರ್ಡ್ ಅನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ ಕೇಂದ್ರ ಸರ್ಕಾರವು ಎರಡು ಆದೇಶಗಳಲ್ಲಿ 1,300 ಖಾತೆಗಳನ್ನು ಮತ್ತು ಪೋಸ್ಟ್‌ಗಳ ಪಟ್ಟಿಯನ್ನು ಹಸ್ತಾಂತರಿಸಿ ಅದನ್ನು ತೆಹಿಡಿಯುವಂತೆ ಕೇಳಿಕೊಂಡಿದೆ. ಆದರೆ ಬುಧವಾರ, ಟ್ವಿಟರ್ ತನ್ನ ಹೇಳಿಕೆಯನ್ನು ಪ್ರಕಟಿಸಿ, ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸದಿರುವ ತನ್ನ ಕ್ರಮವನ್ನು ವಿವರಿಸಿದೆ. ಅದು ತನ್ನ ಹೇಳಿಕೆಯಲ್ಲಿ, “… ನಮಗೆ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ” ಎಂದು ಹೇಳಿದೆ.

“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ತತ್ವಗಳನ್ನು ಅನುಸರಿಸಿ ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಟ್ವಿಟರ್‌ ಹೇಳಿತ್ತು.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ಟ್ವಿಟರ್ ಈ ಹೇಳಿಕೆಯನ್ನು ನೀಡಿದ ಕೂಡಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸ್ವದೇಶಿ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌‌ನಲ್ಲಿ, ಟ್ವಿಟ್ಟರ್‌ ಹೇಳಿಕೆಯನ್ನು “ಅಸಾಮಾನ್ಯ” ಎಂದು ಕರೆದಿದೆ. ’ಕೂ’ ಆಪ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೆಲವೆ ಗಂಟೆಗಳ ನಂತರ, ಸಚಿವಾಲಯದ ಪ್ರತಿನಿಧಿಗಳು ಮತ್ತು ಟ್ವಿಟರ್‌ನ ಜಾಗತಿಕ ನೀತಿ ಮತ್ತು ಸುರಕ್ಷತಾ ತಂಡಗಳು ಸಭೆ ನಡೆಸಿದೆ.

ಸಭೆಯಲ್ಲಿ ಟ್ವಿಟರ್‌ನ ಪ್ರತಿಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ. “ಭಾರತದಲ್ಲಿ, ಅದರ ಸಂವಿಧಾನ ಮತ್ತು ಕಾನೂನುಗಳು ಸರ್ವೋಚ್ಚವಾಗಿವೆ. ಇದನ್ನು ಜವಾಬ್ದಾರಿಯುತ ಘಟಕಗಳು ದೃಡೀಕರಿಸುವುದು ಮಾತ್ರವಲ್ಲದೆ ನೆಲದ ಕಾನೂನಿಗೆ ಅನುಸಾರವಾಗಿ ಬದ್ಧವಾಗಿರುತ್ತವೆ ಎಂದು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್ ತಾನು ಕಾನೂನು ಆಯ್ಕೆಯನ್ನು ನೋಡುತ್ತಿದ್ದೇನೆ ಎಂದು ಹೇಳಿದೆ. “ನಾವು ಸೇವೆ ಸಲ್ಲಿಸುವ ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ. ನಾವು ಭಾರತೀಯ ಕಾನೂನಿನಡಿಯಲ್ಲಿ ನಮಗೆ ಇರುವ ಆಯ್ಕೆಗಳನ್ನು ಹುಡುಕುತ್ತಿದ್ದೇವೆ” ಅದು ಹೇಳಿದೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...