‘ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ, ಯಾವುದೇ ರೀತಿಯ ಸಂಭಾವ್ಯ ಅಹಿತಕರ ಘಟನೆಯನ್ನು ತಪ್ಪಿಸಲು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ’ ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದರುದ್ದೀನ್ ಅಜ್ಮಲ್ ಅವರು ಅಸ್ಸಾಂನ ಮುಸ್ಲಿಂ ಸಮುದಾಯದ ಜನರಲ್ಲಿ ಮನವಿ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 24 ರಂದು ಉದ್ಘಾಟಿಸಲಿದ್ದಾರೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ 60 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಅಸ್ಸಾಂನ ಬಾರ್ಪೇಟಾ ಜಿಲ್ಲೆಯಲ್ಲಿ ಶುಕ್ರವಾರ ರಾಜಕೀಯ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಅಜ್ಮಲ್, ಜನವರಿ 20 ರಿಂದ 25ರವರೆಗೆ ಮುಸ್ಲಿಮರನ್ನು ಮನೆಯಲ್ಲಿಯೇ ಇರುವಂತೆ ಕೇಳಿಕೊಂಡರು.
ಭಾರತೀಯ ಜನತಾ ಪಕ್ಷದವರು ಜನರನ್ನು ರಾಮಮಂದಿರಕ್ಕೆ ಕರೆತರಲು ವಿಶೇಷ ರೈಲುಗಳು, ವಿಮಾನಗಳು ಮತ್ತು ಬಸ್ಗಳನ್ನು ಕಾಯ್ದಿರಿಸಿದ್ದಾರೆ, ಅವರು ದೊಡ್ಡ ಯೋಜನೆಗಳನ್ನು ಹೊಂದಿದ್ದಾರೆ. ನಮ್ಮ ಮುಸ್ಲಿಂ ಸಹೋದರರನ್ನು ಜನವರಿ 20ರಿಂದ 24-25 ರವರೆಗೆ ಪ್ರಯಾಣಿಸದಂತೆ ನಾನು ಒತ್ತಾಯಿಸುತ್ತೇನೆ ಎಂದು ಧುಬ್ರಿ ಸಂಸದ ಅಜ್ಮಲ್ ಹೇಳಿದರು.
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅಸ್ಸಾಂನ 14 ಲೋಕಸಭಾ ಕ್ಷೇತ್ರಗಳಲ್ಲಿ ಮೂರರಲ್ಲಿ ಸ್ಪರ್ಧಿಸಲು ಎಐಯುಡಿಎಫ್ ಯೋಜಿಸುತ್ತಿದೆ ಮತ್ತು ಪಕ್ಷದ ಸದಸ್ಯರು ಈ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸಲು ಪ್ರಾರಂಭಿಸಿದ್ದಾರೆ.
ಅಜ್ಮಲ್ ಅಸ್ಸಾಂನ ಅಲ್ಪಸಂಖ್ಯಾತರ ಪ್ರಾಬಲ್ಯದ ಧುಬ್ರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅವರ ಪಕ್ಷವು 2021ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಸ್ಪರ್ಧಿಸಿತ್ತು. ಕಳೆದ ವರ್ಷ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಅವರು ಅಧ್ಯಕ್ಷರಾಗಿರುವವರೆಗೆ ತಮ್ಮ ಪಕ್ಷವು ಎಐಯುಡಿಎಫ್ ಜೊತೆ ಕೈಜೋಡಿಸುವುದಿಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ; ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಅಪ್ರಾಪ್ತರು ಸೇರಿದಂತೆ ಐವರ ಬಂಧನ