Homeಫ್ಯಾಕ್ಟ್‌ಚೆಕ್ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ...

ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು!

- Advertisement -
- Advertisement -

ವಾಟ್ಸಾಪ್, ಫೇಸ್‌ಬುಕ್ ಮತ್ತು ಟ್ವಿಟರಿನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೈರಲ್ ಸಂದೇಶವು ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆಯ ಆವಿಯನ್ನು ಉಸಿರಾಡುವುದರಿಂದ ರಕ್ತದ ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಉಸಿರಾಟದ ತೊಂದರೆಯನ್ನು ನಿವಾರಿಸುತ್ತದೆ ಎಂದು ಸೂಚಿಸುತ್ತದೆ. ಈ ವಾದವನ್ನು ಬೆಂಬಲಿಸಲು ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ ಎಂದು ಆಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದೆ. ಬದಲಾಗಿ, ಮಿಶ್ರಣವನ್ನು ಉಸಿರಾಟದ ಮೂಲಕ ಒಳಗೆ ತೆಗೆದುಕೊಳ್ಳುವುದರಿಂದ (ಸ್ನಿಫ್ಫಿಂಗ್) ಕರ್ಪೂರ ವಿಷಕ್ಕೆ ಕಾರಣವಾಗಬಹುದು, ಇದು ಕೆಲವು ಸಂದರ್ಭಗಳಲ್ಲಿ ಮಾರಣಾಂತಿಕವಾಗಿದೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಫೇಸ್‌ಬುಕ್‌ನಲ್ಲಿ ಈ ವೈರಲ್ ಅಸತ್ಯವನ್ನು ಹಂಚಿಕೊಂಡಿದ್ದರು.
ವೈರಲ್ ಆದ ಸಂದೇಶದಲ್ಲಿ “ಕರ್ಪೂರ, ಲವಂಗ, ಅಜಿವಾನ ಮತ್ತು ಕೆಲವು ಹನಿಗಳು ನೀಲಗಿರಿ ಎಣ್ಣೆ ಸೇರಿಸಿ ಅರೆದ ಮಿಶ್ರಣ ತಯಾರಿಸಬೇಕು. ದಿನವಿಡೀ ಅದನ್ನು ವಾಸನೆ ಮಾಡುವುದು ಅಂದರೆ ಉಸಿರಿನ ಮೂಲಕ ಒಳಕ್ಕೆ ತೆಗೆದುಕೊಳ್ಳುವುದು. ಇದರಿಂದ ರಕ್ತದಲ್ಲಿನ ಆಮ್ಲಜನಕದ ಮಟ್ಟ ಹೆಚ್ಚುತ್ತದೆ. ಆಮ್ಲಜನಕದ ಮಟ್ಟ ಕಡಿಮೆಯಾದಾಗ ಲಡಾಖ್‌ನ ಪ್ರವಾಸಿಗರಿಗೆ ಈ ಪೊಟ್ಲಿಯನ್ನು (ಮಿಶ್ರಣವನ್ನು) ನೀಡಲಾಗುತ್ತದೆ. ಇದು ಮನೆಮದ್ದು…..

ಫ್ಯಾಕ್ಟ್‌ಚೆಕ್

1. ಕರ್ಪೂರ
ಕರ್ಪೂರವು ಸುಡುವ ಬಿಳಿ ಸ್ಫಟಿಕದ ವಸ್ತುವಾಗಿದ್ದು ಅದು ಬಲವಾದ ಆರೊಮ್ಯಾಟಿಕ್ ವಾಸನೆಯನ್ನು ಹೊಂದಿರುತ್ತದೆ. ನೋವು ಮತ್ತು ತುರಿಕೆ ಕಡಿಮೆ ಮಾಡಲು ಇದನ್ನು ಕೆಲವೊಮ್ಮೆ ಚರ್ಮದ ಮೇಲೆ ಉಜ್ಜಲಾಗುತ್ತದೆ.

ಇದನ್ನು ವಿಕ್ಸ್ ವೆಪೊರಬ್‌ನಂತಹ ಸಾಮೂಹಿಕ ಮೂಗಿನ ಡಿಕೊಂಜೆಸ್ಟೆಂಟ್ ಜೆಲ್‌ಗಳಲ್ಲಿ ಸಣ್ಣ ಪ್ರಮಾಣದಲ್ಲಿ (4-5%) ಬಳಸಲಾಗುತ್ತದೆ. ಆದರೆ ಅದರ ಪರಿಣಾಮಕಾರಿತ್ವದ ಬಗ್ಗೆ ಪುರಾವೆಗಳು ಗೊಂದಲಮಯವಾಗಿವೆ. ಕೆಲವು ಹಳೆಯ ಅಧ್ಯಯನಗಳು ಕರ್ಪೂರ ಮತ್ತು ನೀಲಗಿರಿ ಮೂಗಿನ ಅನಾರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಂಡುಹಿಡಿದಿವೆ.

ಔಷಧೀಯವಲ್ಲದ ಕರ್ಪೂರವನ್ನು ಅಳೆಯದ ಪ್ರಮಾಣದಲ್ಲಿ ಉಸಿರಾಡುವುದು ಅಥವಾ ಸೇವಿಸುವುದರಿಂದ ಒಡ್ಡಿಕೊಂಡ ಕೆಲವೇ ನಿಮಿಷಗಳಲ್ಲಿ, ವಿಶೇಷವಾಗಿ ಮಕ್ಕಳಲ್ಲಿ ತೀವ್ರ ವಿಷತ್ವಕ್ಕೆ ಕಾರಣವಾಗಬಹುದು.

ಅಮೇರಿಕನ್ ಅಸೋಸಿಯೇಷನ್ ಆಫ್ ಪಾಯ್ಸನ್ ಕಂಟ್ರೋಲ್ ಸೆಂಟರ್ ವರದಿಯ ಪ್ರಕಾರ, 2018 ರಲ್ಲಿ, ಅಮೆರಿಕದಲ್ಲಿ ಸುಮಾರು 9,500 ಕರ್ಪೂರ ವಿಷದ ಪ್ರಕರಣಗಳು ನಡೆದಿವೆ. ಅವುಗಳಲ್ಲಿ 10 ಜೀವಕ್ಕೆ ಅಪಾಯಕಾರಿಯಾದ ಪ್ರಕರಣಗಳಿದ್ದವು ಮತ್ತು ನೂರಾರು ಪ್ರಕರಣಗಳು ಗಮನಾರ್ಹ ಅಂಗವೈಕಲ್ಯಕ್ಕೆ ಕಾರಣವಾಗಿವೆ.

ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಸಿಡಿಸಿ) ಮಾರ್ಗಸೂಚಿಗಳ ಪ್ರಕಾರ, ಕರ್ಪೂರ ಆವಿಗಳನ್ನು ಉಸಿರಾಡುವುದರಿಂದ ಮೂಗು, ಗಂಟಲು ಮತ್ತು ಕಣ್ಣಿನಲ್ಲಿ ಕೆರಳಿಕೆ, ತುರುಸುವಿಕೆ ಉಂಟಾಗುತ್ತದೆ. ಇದು ರೋಗಗ್ರಸ್ಥತನಕ್ಕೆ, ಮಾನಸಿಕ ಗೊಂದಲ, ಹೊಟ್ಟೆ ನೋವಿಗೆ ಕಾರಣವಾಗಬಹುದು. ಹೆಚ್ಚಿನ ಪ್ರಮಾಣದಲ್ಲಿ ಸೆವಿಸಿದಾಗ ಇದು ಕೆಲವು ಸಂದರ್ಭಗಳಲ್ಲಿ ಸಾವಿಗೆ ಕಾರಣವಾಗಬಹುದು. ಕರ್ಪೂರ ಆವಿ ಇನ್ಹಲೇಷನ್ ನಿಂದ ಉಂಟಾದ ವಿಷದ ಬಗ್ಗೆ ಭಾರತದಲ್ಲಿ ಹಲವಾರು ಪ್ರಕರಣಗಳು ವರದಿಯಾಗಿವೆ.

2. ಲವಂಗ
ಲವಂಗ ಆವಿ ಕೂಡ ವಿಷಕಾರಿಯಾಗಬಹುದು ಎಂದು ವೈಜ್ಞಾನಿಕ ವರದಿಗಳು ಹೇಳಿವೆ. ಆದರೆ ಇದು ರಕ್ತದ ಆಮ್ಲಜನಕವನ್ನು ಹೆಚ್ಚಿಸುತ್ತದೆ ಅಥವಾ ಉಸಿರಾಟದ ತೊಂದರೆಯನ್ನು ನಿವಾರಿಸುತ್ತದೆ ಎಂದು ಸೂಚಿಸಲು ಯಾವುದೇ ಸಂಶೋಧನೆಗಳಿಲ್ಲ.

3. ಅಜಿವಾನ ಮತ್ತು ನೀಲಗಿರಿ ಎಣ್ಣೆ

ಮೇಲಿನ ಎರಡೂ ಪದಾರ್ಥಗಳಿಗೆ, ಅವು ರಕ್ತದ ಆಮ್ಲಜನಕವನ್ನು ಹೆಚ್ಚಿಸುತ್ತವೆ ಅಥವಾ ಉಸಿರಾಟದ ತೊಂದರೆಯನ್ನು ನಿವಾರಿಸುತ್ತವೆ ಎಂದು ಸೂಚಿಸಲು ಯಾವುದೇ ಸಂಶೋಧನೆ ಅಥವಾ ಪುರಾವೆಗಳಿಲ್ಲ.

ವಾಟ್ಸಾಪ್ ಫಾರ್ವರ್ಡ್‌ ಸಂದೇಶದ ಇತರ ಆವೃತ್ತಿಗಳು ಆಯುರ್ವೇದ ವೈದ್ಯ ಪ್ರಜಗ್ರಾಜ್ ದಾಬಿ ಸಂಶೋಧನೆ ಮಾಡಿದ್ದಾರೆ ಎಂದು ಉಲ್ಲೇಖಿಸುತ್ತವೆ. ಅವರು ಹಲವು ಕೋವಿಡ್ ರೋಗಿಗಳಿಗೆ ಸೂತ್ರೀಕರಣದೊಂದಿಗೆ ಚಿಕಿತ್ಸೆ ನೀಡಿದ್ದಾರೆಂದು ಭಾವಿಸಲಾಗಿದೆ. ಆದರೆ ಈ ಹಕ್ಕನ್ನು ದಾಬಿ ತಿರಸ್ಕರಿಸಿದ್ದಾರೆ.

ಕೋವಿಡ್ ರೋಗಿಗಳ ಮೇಲೆ ಆಂಬ್ಯುಲೆನ್ಸ್‌ಗಳು ಈ ಸೂತ್ರೀಕರಣವನ್ನು ಬಳಸುತ್ತಿವೆ ಎಂದು ಇತರ ಆವೃತ್ತಿಗಳು ಹೇಳುತ್ತವೆ. ಆದರೆ ಕೋವಿಡ್ ಆಂಬುಲೆನ್ಸ್‌ಗಳಿಗಾಗಿ ಆರೋಗ್ಯ ಸಚಿವಾಲಯದ ಪ್ರೋಟೋಕಾಲ್‌ನಲ್ಲಿ ಅಂತಹ ಯಾವುದೇ ಚಿಕಿತ್ಸಾ ಮಾರ್ಗಸೂಚಿಗಳನ್ನು ಉಲ್ಲೇಖಿಸಲಾಗಿಲ್ಲ.

ಕರ್ಪೂರ, ಲವಂಗ ಅಥವಾ ಅಜಿವಾನ ಬೀಜಗಳು ರಕ್ತದ ಆಮ್ಲಜನಕವನ್ನು ಹೆಚ್ಚಿಸುತ್ತವೆ ಅಥವಾ ಉಸಿರಾಟದ ತೊಂದರೆಯ ಸಮಯದಲ್ಲಿ ಪರಿಹಾರವನ್ನು ನೀಡುತ್ತವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸೌಮ್ಯ ಉಸಿರಾಟದ ಸೋಂಕುಗಳು ಅಥವಾ ಉರಿಯೂತದ ಸೈನುಟಿಸ್ ಸಮಯದಲ್ಲಿ ಇವುಗಳು ‘ಉತ್ತಮ ಅನುಭವ’ ಚಿಕಿತ್ಸೆಯಾಗಿ ಕಾರ್ಯನಿರ್ವಹಿಸಬಹುದು. ಕೋವಿಡ್ ರೋಗಿಗಳಲ್ಲಿ ಇವು ರಕ್ತದ ಆಮ್ಲಜನಕದ ಮಟ್ಟವನ್ನು ಹೆಚ್ಚಿಸಬಹುದು ಎಂದು ಸೂಚಿಸುವುದರಿಂದ ಜನರು ಮನೆಮದ್ದುಗಳನ್ನು ಅವಲಂಬಿಸಬಹುದು ಮತ್ತು ವೈದ್ಯಕೀಯ ಸಹಾಯವನ್ನು ತೆಗೆದುಕೊಳ್ಳುವುದಿಲ್ಲ. ಮಿಶ್ರಣವನ್ನು ಸ್ನಿಫ್ ಮಾಡುವುದರಿಂದ ಕರ್ಪೂರ ವಿಷವೂ ಆಗಿ ಪರಿಣಮಿಸಬಹುದು, ಇದು ಕೆಲವು ಸಂದರ್ಭಗಳಲ್ಲಿ ಮಾರಣಾಂತಿಕವಾಗಬಹುದು.

(ಕೃಪೆ: ಅಲ್ಟ್‌ನ್ಯೂಸ್)


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...