Homeಚಳವಳಿ‘ರೈತರ ವಿರುದ್ದ ಬಲ ಪ್ರಯೋಗಿಸಬೇಡಿ’- ರೈತರ ಬೆಂಬಲಕ್ಕೆ ನಿಂತ ಮೇಘಾಲಯ ರಾಜ್ಯಪಾಲ!

‘ರೈತರ ವಿರುದ್ದ ಬಲ ಪ್ರಯೋಗಿಸಬೇಡಿ’- ರೈತರ ಬೆಂಬಲಕ್ಕೆ ನಿಂತ ಮೇಘಾಲಯ ರಾಜ್ಯಪಾಲ!

ಯಾವುದೇ ಕಾನೂನುಗಳು ರೈತರ ಪರವಾಗಿಲ್ಲ. ರೈತರು ಮತ್ತು ಸೈನಿಕರು ತೃಪ್ತರಾಗದ ದೇಶವು ಮುಂದೆ ಸಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಮೇಘಾಲಯ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಭಾನುವಾರ ಮಾತನಾಡಿದ ಅವರು, ರೈತರ ವಿರುದ್ದ ಬಲ ಪ್ರಯೋಗಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ತಮ್ಮ ತವರು ಜಿಲ್ಲೆ ಬಾಘ್ಪತ್‌‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯ ಪಾಲ್, “ಕೇಂದ್ರ ಸರ್ಕಾರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯ ಕಾನೂನು ಖಾತರಿ ನೀಡಿದರೆ, ರೈತರು ತಮ್ಮ ಪಟ್ಟು ಸಡಿಲಿಸಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ರೈತರ ವಿರುದ್ಧ ಬಲವನ್ನು ಪ್ರಯೋಗಿಸಬೇಡಿ. ಅವರನ್ನು ದೆಹಲಿಯಿಂದ ಖಾಲಿ ಕೈಯಿಂದ ಮನೆಗೆ ಕಳುಹಿಸಬಾರದು ಎಂದು ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಸತ್ಯ ಪಾಲ್‌ ಹೇಳಿದ್ದಾರೆ.

“ಯಾವುದೇ ಕಾನೂನುಗಳು ರೈತರ ಪರವಾಗಿಲ್ಲ. ರೈತರು ಮತ್ತು ಸೈನಿಕರು ತೃಪ್ತರಾಗದ ದೇಶವು ಮುಂದೆ ಸಾಗಲು ಸಾಧ್ಯವಿಲ್ಲ, ಜೊತೆಗೆ ಅಂತಹ ದೇಶವನ್ನು ಉಳಿಸಲು ಸಾಧ್ಯವಿಲ್ಲ. ಆದ್ದರಿಂದ ಸೈನ್ಯ ಮತ್ತು ರೈತರನ್ನು ತೃಪ್ತಿಪಡಿಸಬೇಕು” ಎಂದು ಸತ್ಯ ಪಾಲ್ ಹೇಳಿದ್ದಾರೆ.

ರೈತರ ಸ್ಥಿತಿ ಕೆಟ್ಟದ್ದಾಗಿದೆ ಎಂದು ವಿವರಿಸಿದ ಸತ್ಯ ಪಾಲ್, “ರೈತರು ದಿನದಿಂದ ದಿನಕ್ಕೆ ಬಡವರಾಗುತ್ತಿದ್ದಾರೆ, ಆದರೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವೇತನವು ಪ್ರತಿ ಮೂರು ವರ್ಷಗಳ ನಂತರ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

“ಅವರು ಹೇಗೆ ಬಡವರಾಗುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ. ರೈತರ ಸರ್ವನಾಶ ಅವರ ಅರಿವಿಲ್ಲದೆ ನಡೆಯುತ್ತಿದೆ. ಅವರು ಬೆಳೆಗಳು ಬಿತ್ತನೆ ಮಾಡಲು ಹೋದಾಗ ಬೆಲೆ ಇರುತ್ತದೆ. ಆದರೆ ಅದನ್ನು ಕೊಯ್ಯಲು ಹೋದಾಗ ಬೆಲೆ ಕಡಿಮೆಯಾಗುತ್ತದೆ” ಎಂದು ಸತ್ಯ ಪಾಲ್ ಹೇಳಿದ್ದಾರೆ.

ಹೊಸ ಕೃಷಿ ಕಾನೂನುಗಳ ಪರವಾಗಿ ಮಂಡಿಸಿದ ವಾದಗಳನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸತ್ಯ ಪಾಲ್, “ರೈತರು ಈಗ ಯಾವುದೇ ಸ್ಥಳದಲ್ಲಿ ಬೆಳೆಗಳನ್ನು ಮಾರಾಟ ಮಾಡಬಹುದೆಂದು ಸಾಕಷ್ಟು ಪ್ರಚಾರ ಮಾಡಲಾಯಿತು. ಆದರೆ ಇದು 15 ವರ್ಷಗಳ ಹಳೆಯ ಕಾನೂನು. ಇದರ ಹೊರತಾಗಿಯೂ, ಮಥುರಾದ ರೈತನು ಗೋಧಿಯೊಂದಿಗೆ ಪಾಲ್ವಾಲ್‌ಗೆ ಹೋದಾಗ, ಅವನ ಮೇಲೆ ಲಾಠಿಚಾರ್ಜ್ ಆಗುತ್ತದೆ. ಸೋನಿಪತ್‌ನಿಂದ ಒಬ್ಬ ರೈತ ನರೇಲಾಕ್ಕೆ ಬಂದಾಗ ಅವನ ಮೇಲೆಯು ಲಾಠಿಚಾರ್ಜ್ ಆಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರ ಅನೇಕ ಪ್ರಶ್ನೆಗಳಿವೆ, ಅದಕ್ಕೆ ಉತ್ತರಿಸಬೇಕು. ಇಂದು, ರೈತರ ಪರವಾಗಿ ಯಾವುದೇ ಕಾನೂನು ಇಲ್ಲ. ಇದನ್ನು ಸರಿಪಡಿಸಬೇಕಾಗಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ವಿಷಯದಲ್ಲಿ ನಾನು ಯಾವುದೇ ಹಂತಕ್ಕೂ ಹೋಗಲು ಸಿದ್ದನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...