Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...