Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...