Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...