Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...