Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...