Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...