Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...