Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...