Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...