Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...