Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...