Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....