Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...