Homeರಾಷ್ಟ್ರೀಯಕಲೆಯನ್ನು (ಸಿನೆಮಾ) ಅರ್ಥ ಮಾಡಿಕೊಳ್ಳಬೇಕಾ ಅಥವಾ?

ಕಲೆಯನ್ನು (ಸಿನೆಮಾ) ಅರ್ಥ ಮಾಡಿಕೊಳ್ಳಬೇಕಾ ಅಥವಾ?

- Advertisement -
- Advertisement -

ಒಂದು – ನನ್ನ ಒಬ್ಬ ಮಿತ್ರ ಹೇಳಿದ ಘಟನೆ. ಅವನು ಮೊದಲ ಸಲ ಮುಂಬಯಿಗೆ ಹೋಗಿದ್ದಾಗ ಅವನಿಗಿದ್ದ ಒಂದು ಆಸೆ; ಮಲ್ಟಿಪ್ಲೆಕ್ಸ್‍ನಲ್ಲಿ ಒಂದು ಸಿನೆಮಾ ನೋಡಬೇಕು ಅಂತ. ಆಯ್ತು ಹೋದ, ಯಾವುದೋ ಒಂದು ದೊಡ್ಡ ಹೀರೋನ ಚಿತ್ರದ ಟಿಕೆಟ್ ತೊಗೊಂಡು, ಒಂದು ಹಾಲ್‍ನಲ್ಲಿ ಕುಳಿತ. ಅಲ್ಲಿ ಆ ದೊಡ್ಡ ಹೀರೋನ ಸಿನಿಮಾ ಶುರುವಾಗುವ ಬದಲಿಗೆ ಯಾವುದೋ ಸಾಕ್ಷಚಿತ್ರ ಶುರುವಾಯಿತು. ಆಯಿತು, ಕೆಲನಿಮಿಷ ಇದನ್ನು ತೋರಿಸಿ ಸಿನೆಮಾ ಶುರು ಮಾಡ್ತಾರೆ ಎಂದು ಕುಳಿತವನಿಗೆ ತಾನು ತಪ್ಪಾಗಿ ಬೇರೊಂದು ಹಾಲ್‍ಗೆ ಬಂದಿದ್ದೇನೆ ಎಂದು ತಿಳಿಯುವಷ್ಟರಲ್ಲಿ ತುಂಬಾ ತಡವಾಗಿತ್ತು.

“ಥೋ, ಅದ್ಹೆಂತದೋ ಮುಂಬಯಿಯಲ್ಲಿ ಇಲಿ ಹಿಡಿಯುವವರ ಚಿತ್ರ ಇತ್ತು ಮಾರಾಯಾ, ಒಂದು ಇಲಿ ಹೊಡೆದುಕೊಟ್ಟರೆ ಇಂತಿಷ್ಟು ರೂಪಾಯಿ ಕೊಡ್ತಾರೆಂತೆ, ದಿನಾ ರಾತ್ರಿ 12 ಗಂಟೆ ನಂತರ ಇವರೆಲ್ಲಾ ಕೆಲಸ ಶುರು ಹಚ್ಕೋತಾರೆ, ಹೆಂಗೆ ಹಿಡಿತಾರೆ ಗೊತ್ತಾ ಇಲೀನಾ, ಅವರ ಜೀವನ ಹೆಂಗಿರುತ್ತೆ ಗೊತ್ತಾ…” ಎಂದೆಲ್ಲಾ ಅವನು ಆ ಚಿತ್ರದ ಬಗ್ಗೆ ಸವಿಸ್ತಾರವಾಗಿ ಕಣ್ಣುಮುಂದೆ ಬರುವಂತೆ ಆ ಘಟನೆಯಾದ ಐದಾರು ವರ್ಷಗಳ ನಂತರವೂ ನಿನ್ನೆಯೇ ನೋಡಿದ ಸಿನೆಮಾದಂತೆ ಹೇಳುತ್ತಿದ್ದ; ಅದರೊಂದಿಗೆ ಎಂಥಾ ಡಬ್ಬಾ ಸಿನೆಮಾ, ಹೀರೋನ ಸಿನೆಮಾ ನೋಡೋಕ್ ಹೋಗಿ ಅದನ್ನು ನೋಡಬೇಕಾಯಿತು ಎನ್ನುವ ಕಡುಬೇಸರವನ್ನೂ ವ್ಯಕ್ತಪಡಿಸುತ್ತಿದ್ದ.

ಎರಡು – ಮುಂಬಯಿಯಲ್ಲಿ ಪಂಡಿತ್ ಪ್ರದೀಪ್ ಚಟರ್ಜಿಯವರ ಬಳಿ ಹಿಂದುಸ್ತಾನಿ ಸಂಗೀತ ಕಲಿಯುತ್ತಿದ್ದೆ. ನನ್ನ ಜೊತೆಗೆ ಕಲಿಯುತ್ತಿದ್ದ ಒಬ್ಬ ಶಿಷ್ಯೆ ಏನೋ ಹೇಳುತ್ತ “ಅವರು (ಒಬ್ಬ ಹಿಂದುಸ್ತಾನಿ ಗಾಯಕರನ್ನು ಹೆಸರಿಸಿ) ಹಾಡೋದು ನಮಗೆ ಅರ್ಥಾನೇ ಆಗೋಲ್ಲ” ಎಂದು ಬಿಟ್ಟಳು. ಅದನ್ನು ಕೇಳಿ ಸಿಟ್ಟಿಗೆದ್ದ ನಮ್ಮ ಗುರುಗಳು “ಏನ್ರೀ, ಯಾರದೋ ಮನೆಗೆ ಹೋದಾಗ, ಅಲ್ಲಿ ಒಳ್ಳೇ ಊಟ ಬಡಿಸಿದ ಮೇಲೆ, ಅದನ್ನು ಹೇಗೆ ಮಾಡಿದ್ರು, ಯಾವ್ಯಾವ ಪದಾರ್ಥಗಳನ್ನು ಹಾಕಿದ್ರು ಅಂತಾ ತಿಳಕೊಳ್ಳೋಕೆ ಹೋಗ್ತೀರಾ? ಆ ಊಟ ಎಂಜಾಯ್ ಮಾಡೋಕೆ ಅದೆಲ್ಲಾ ತಿಳಿಯೋದು ಅವಶ್ಯಕವಾ? ಅವೆಲ್ಲಾ ಏನೂ ತಿಳಿಯದೇ ಊಟ ಮಾಡಿದ್ರೆ ಸಮಾಧಾನ ಆಗಲ್ವಾ?… ಇಂಥಾ ಮಾತುಗಳು (ಆ ಶಿಷ್ಯೆ ಕೇಳಿದ್ದು) ನಿಮ್ಮ ಬಾಯಿಂದ ಬರಲೇಬಾರದು.” ಎಂದರು.
ಮೂರು – ಮನೆಯಲ್ಲಿ ಟಿವಿ ಆನ್ ಆಗಿತ್ತು, ಟೊರಂಟೀನೋನ ಕಿಲ್ ಬಿಲ್ 1 ಚಿತ್ರ ಬರುತ್ತಿತ್ತು. ಯಾರೂ ನೋಡುತ್ತಿರಲಿಲ್ಲ. ಆ ಚಿತ್ರದಲ್ಲಿ ವಿವಿಕಾ ಫಾಕ್ಸ್‍ಳನ್ನು ಕೊಲ್ಲುವ ಉದ್ದೇಶದಿಂದ ಊಮಾ ಥರ್ಮನ್ ಬಂದಾಗ ಹೊಡೆದಾಟದ ದೃಶ್ಯವೊಂದಿದೆ. ಏನೋ ಮಾಡುತ್ತಿದ್ದ ನನ್ನ ಅಮ್ಮ ಆ ದೃಶ್ಯವನ್ನು ನೋಡುತ್ತ ನಿಂತುಬಿಟ್ಟರು, “ಇದೇನಿದು, ಹೆಂಗೆ ಹೊಡೆದಾಡ್ತಾರೆ, ಓಹ್, ಸುಮ್ಮನಾದ್ರಲ್ಲ, ಹೊಡೆದಾಟ ಮುಗಿಸಿದ್ರಾ, ಓ… ಆ ಮಗು ಬಂತು ಅಂತ ಸುಮ್ಮನಾದ್ರಾ, ಅಯ್ತೋ ಆ ಮಗು ಹೋದ ಕೂಡಲೇ ಮತ್ತೇ ಶುರುಮಾಡಿಬಿಟ್ರಲ್ಲ…ಹಾಹಹಾಹಾ…” ಜೀವನದಲ್ಲಿ ಎಂದು ಹೊಡೆದಾಟದ ಸಿನೆಮಾಗಳನ್ನು ನೋಡದ ಅವರು ಪ್ರತಿಕ್ರಿಯಿಸಿದ್ದು ಹೀಗೆ. ಅಷ್ಟರಲ್ಲಿ ಕಲಾತ್ಮಕ ಸಿನೆಮಾಗಳನ್ನು ನೋಡುವ ಅಭಿರುಚಿ ಹೊಂದಿರುವ ಅಪ್ಪ ಅದನ್ನು ನೋಡಿ, “ಇದೇನು, ಮಕ್ಕಳ ತರಾ ಹೊಡೆದಾಟದ ಸಿನೆಮಾ ನೋಡ್ತೀರಿ…” ಎಂದು ಗದರಿಸಿದರು.
ನಾಲ್ಕು – ಹಲವಾರು ಬಾರಿ ಕೇಳಿದ್ದು; ಆವಯ್ಯನ ಸಿನೆಮಾಗಳು ಅರ್ಥಾನೇ ಆಗಲ್ಲ..
ಐದು – “ಗಾಡ್‍ಫಾದರ್ ಚಿತ್ರವನ್ನು ಮೊದಲ ಸಲ ನೋಡಿದಾಗ ಏನೂ ತಿಳೀಲಿಲ್ಲ, ಎರಡನೇ ಸಲ ನೋಡಿದಾಗಲೂ ತಿಳಿಯಲಿಲ್ಲ, ಆನಂತರ ಗಾಡ್‍ಫಾದರ್ ಪುಸ್ತಕ ಓದಿ ಸಿನೆಮಾ ನೋಡಿದೆ; ಎಂತಹ ಅದ್ಭುತ ಸಿನೆಮಾ” ಒಬ್ಬ ಗೆಳೆಯ ಹೇಳಿದ್ದು.
ರೋಮನ್ ಪೋಲನ್ಸ್ಕಿ ಅವರ ಅತ್ಯಂತ ಸುಪ್ರಸಿದ್ಧ ಸಿನೆಮಾ ರೋಸ್‍ಮೇರಿ’ಸ್ ಬೇಬಿ ಯನ್ನು ಮತ್ತು ಸ್ಟ್ಯಾನ್ಲಿ ಕ್ಯುಬರಿಕ್ ಅವರ ಶೈನಿಂಗ್ ಚಿತ್ರಗಳನ್ನು ಹೇಗೆ ಅರ್ಥೈಸಬೇಕು?
ದಕ್ಷಿಣ ಭಾರತದ ಸ್ಟಾರ್‍ಗಳ ಅಭಿಮಾನಿಗಳು ಆಯಾ ಸ್ಟಾರ್‍ನ ಎಲ್ಲಾ ಸಿನೆಮಾಗಳನ್ನು ಆನಂದಿಸುತ್ತಾರಾ? ಹೇಗೆ?
ಒಂದು ಸಿನೆಮಾ ಅನ್ನು ಆನಂದಿಸಲು ಅರ್ಥ ಮಾಡಿಕೊಳ್ಳಲೇಬೇಕೆ?


ಸುಲಭ ಉತ್ತರಗಳಿಲ್ಲ.

ಸಿನೆಮಾಗಳು ಮತ್ತು ಆ ಸಿನೆಮಾಗಳನ್ನು ಆಸ್ವಾದಿಸುವುದು ವೈಯಕ್ತಿಕ ಅಭಿರುಚಿಗಳೊಂದಿಗೆ ಆಯಾ ಪ್ರದೇಶದ ಸಾಮಾಜಿಕ ಪರಿಸ್ಥಿತಿಗಳ ಮೇಲೆ ಕೂಡ ಅವಲಂಬಿಸಿರುತ್ತದೆ. ಹಲವಾರು ಸಿನೆಮಾಗಳು ಸರ್ವಕಾಲದಲ್ಲೂ ಪ್ರಸ್ತುತವಾಗಿದ್ದರೆ ಕೆಲವು ಸಿನೆಮಾಗಳನ್ನು ಕೇವಲ ಒಂದು ದಶಕದ ನಂತರ ನೋಡಲಾಗುವುದಿಲ್ಲ. ಹೌದು ಸಿನೆಮಾಗೂ ಮತ್ತು ಕಲೆಯ ಇತರ ಪ್ರಕಾರಗಳಿಗೂ ಖಂಡಿತವಾಗಿಯೂ ವ್ಯತ್ಯಾಸಗಳಿವೆ. ಒಂದು ಮಾಡರ್ನ್ ಪೇಂಟಿಂಗ್‍ಗೂ ಒಂದು ‘ಕಲಾತ್ಮಕ’(ನಾನು ತುಂಬಾ ದ್ವೇಷಿಸುವ ಪದ) ಚಿತ್ರಕ್ಕೂ ಸಾಮ್ಯತೆಗಳಿವೆಯೆ? ಅವೆರಡನ್ನೂ ಹೋಲಿಸಬಹದಾ? ಅನೇಕರು ಮಾಡರ್ನ್ ಪೇಂಟಿಂಗ್ ಎಂದಕೂಡಲೇ ಮೂಗು ಮುರಿಯುತ್ತಾರೆ; ಸುಮ್ಮನೇ ಏನೋ ಗೀರಿದ್ದು ಎಂದುಕೊಳ್ಳುತ್ತಾರೆ (ಅನೇಕ ಕವಿತೆಗಳಿಗೂ ಇದೇ ತೆರನಾದ ಅಭಿಪ್ರಾಯ ಬಂದಿದ್ದನ್ನು ಕೇಳಿದ್ದೇವೆ.) ಆ ಪೇಂಟಿಂಗ್‍ಅನ್ನು ಅರ್ಥಮಾಡಿಕೊಳ್ಳಲೇಬೇಕಾ? ಒಂದು ಅದ್ಭುತ ಪೇಂಟಿಂಗ್ ನಮ್ಮನ್ನು ಅದನ್ನೇ ನೋಡುತ್ತ ಕೆಲಸಮಯ ನಿಲ್ಲಿಸಿದರೆ ಸಾಕಲ್ಲವೇ? ಪೇಂಟಿಂಗ್‍ನ ಯಾವ ಜ್ಞಾನವೂ ಇಲ್ಲದ ಒಬ್ಬನ ಎದುರಿಗೆ ಒಂದು ಅದ್ಭುತವೆಂದು ಪರಿಗಣಿಸಲಾದ ಪೇಂಟಿಂಗ್ ಮತ್ತು ಇನ್ನೊಂದು ಕೆಟ್ಟ ಪೇಂಟಿಂಗ್ ತಂದಿಟ್ಟರೆ ಅವನು ಯಾವ ಪೇಂಟಿಂಗ್ ಅನ್ನು ನೋಡುತ್ತಾನೆ? ಅವನು ಎರಡೂ ಪೇಂಟಿಂಗ್‍ಗಳನ್ನು ಇಷ್ಟಪಡದೇ ಹೋದರೂ ಅವೆರಡರಲ್ಲಿ ಆ ಅದ್ಭುತವಾದ ಕಲೆಯ ಕೆಲಸದ ಎದುರಿಗೆ ಖಂಡಿತವಾಗಿಯೂ ಹೆಚ್ಚು ಸಮಯ ಕಳೆಯುತ್ತಾನೆ. ಅವನು ಏಕೆ ಆ ಅದ್ಭುತ ಕಲಾಕೃತಿಯನ್ನು ಹೆಚ್ಚು ಸಮಯ ನೋಡುತ್ತ ನಿಂತ ಎನ್ನುವುದು ವಿಶ್ಲೇಷಣೆಯನ್ನು ವಿಮರ್ಶಕರೆಂದು ಕರೆದುಕೊಳ್ಳುವವರ ಕೆಲಸ.
ಒಂದು ಕಲಾಕೃತಿ, ಸಂಗೀತ ಅಥವಾ ಉತ್ಕøಷ್ಟ ಅಡುಗೆಯನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳದೇ ಆಸ್ವಾದಿಸಬಹುದಾದರೆ, ಅದು ಸಿನೆಮಾಗೆ ಅನ್ವಯವಾಗುವುದೇ?

ಇಲಿಗಳನ್ನು ಕೊಲ್ಲುವವರ ಚಿತ್ರವನ್ನು ನೋಡಿದ ಆ ಗೆಳೆಯನಿಗೆ ಆ ಚಿತ್ರ ಅಷ್ಟೊಂದು ತಟ್ಟಿದ್ದರೂ (ಐದಾರೂ ವರ್ಷಗಳ ನಂತರವೂ ನೆನಪಿಟ್ಟುಕೊಂಡು ಅಷ್ಟೊಂದು ಉತ್ಸಾಹದಿಂದ ಮಾತನಾಡುತ್ತಾನೆ ಎಂದರೆ) ಅವನ ಬೇಸರ ತಣಿದಿದ್ದಿಲ್ಲ. ಆಗ ಅವನನ್ನು ಪೂರ್ವಗ್ರಹಪೀಡಿತನೆಂದು ಕರೆಯಬಹುದಲ್ಲವೇ? ಒಂದು ಚಿತ್ರ ನಮ್ಮನ್ನು ಆಳವಾಗಿ ತಟ್ಟಿದರೆ ಸಾಕಲ್ಲವೇ? ಆದರೆ ಒಂದು ಚಿತ್ರದಲ್ಲಿ ಏನಾಗುತ್ತದೆ ಎನ್ನುವುದು ತಿಳಿಯದೇ ಆ ಚಿತ್ರ ನೋಡುಗನಿಗೆ ತಟ್ಟಬಲ್ಲದೇ? ಹೌದು ಮತ್ತು ಇಲ್ಲ. ಟಾರ್ಕೊವ್‍ಸ್ಕಿ ಅವರ ಸ್ಟಾಕರ್ ಎನ್ನವ ಚಿತ್ರಗಳಿಗೆ ಅರ್ಥವಾಗಲೇಬೇಕು ಎನ್ನುವ ಷರತ್ತುಗಳಿಲ್ಲ. ಆದರೆ ಈ ಹಿಂದೆಯೇ ಹೇಳಿದಂತೆ ಚಲನಚಿತ್ರ ರಚನೆ/ಚಿತ್ರಕಥೆ ಬರಹ ಎನ್ನುವುದು ಒಂದು ಸಂಕೀರ್ಣ ಕಲೆ. ಬರಹಗಾರನು ಅಥವಾ ನಿರ್ದೇಶಕನು ಮಾಡಿದ ತಪ್ಪಿನಿಂದ ನೋಡುಗನಿಗೆ ಚಿತ್ರ ಅಥವಾ ಕತೆಯು ಅರ್ಥವಾಗದಿದ್ದಲ್ಲಿ ಇದು ಅನ್ವಯಿಸುವುದಿಲ್ಲ.

ಇನ್ನು ಕೆಲವು ಸಲ ನಮ್ಮ ನಮ್ಮ ಸಾಮಾಜಿಕ ಕಾರಣಗಳಿಂದಾಗಿಯೋ ಅಥವಾ ವೈಯಕ್ತಿಕ ಕಾರಣಗಳಿಂದಾಗಿಯೋ, ಆಯಾ ಪ್ರದೇಶಗಳಲ್ಲಿ ಅಂತಹ ವಿಷಯಗಳು ಮುನ್ನೆಲೆಗೆ ಬಾರದ ಕಾರಣಗಳಿಂದಲೋ ಅಥವಾ ಇನ್ನಾವುದೋ ಕಾರಣದಿಂದ ಒಂದು ಒಳ್ಳೆಯ ಚಿತ್ರವೂ ಇಷ್ಟವಾಗದೇ ಹೋಗಬಹುದು.

ಇವೆಲ್ಲವುಗಳೂ ಇನ್ನೊಂದು ಮೂಲಭೂತ ಪ್ರಶ್ನೆಗೆ ಎಡೆಮಾಡಿಕೊಡುತ್ತವೆ. ಅಂತಿಮವಾಗಿ ಕಲೆಯ ಉದ್ದೇಶವಾದರೂ ಏನು? ಮನರಂಜನೆ ಎಂದರೇನು? ಮೇಲೆ ಹೆಸರಿಸಿದ ಸೈಕಾಲಾಜಿಕಲ್ ಹಾರರ್ ಚಿತ್ರವಾದ ಶೈನಿಂಗ್ ಮತ್ತು ರೋಸ್‍ಮೆರಿ’ಸ್ ಬೇಬಿ ಚಿತ್ರಗಳು ನಮಗೆ ಮನರಂಜನೆ ನೀಡುತ್ತವೆಯೇ? ಆ ಚಿತ್ರಗಳನ್ನು ನೋಡಿದ ನಂತರ ನಮ್ಮ ಮನದಲ್ಲಿ ಉಳಿಯುವ ಭಾವನೆಗಳಾದರೂ ಯಾವುವು? ಒಂದು ಚಿತ್ರ ಪ್ರಾರಂಭದಿಂದ ಅಂತ್ಯದವರೆಗೆ ನಮ್ಮನ್ನು ಹಿಡಿದಿಟ್ಟುಕೊಂಡರೆ ಆ ಚಿತ್ರ ನಮಗೆ ಮನರಂಜನೆ ನೀಡಿದಂತೆಯೇ? ಕೆಲವು ಸಲ ಕೆಟ್ಟ ಚಿತ್ರಗಳೂ ನಮ್ಮನ್ನು ನೋಡಿಸಿಕೊಂಡು ಹೋಗುತ್ತವೆ, ಚಿತ್ರ ನೋಡಿದ ನಂತರ ಇದನ್ಯಾಕೆ ನೋಡಿದೆ ಎನ್ನುವ ಸಿಟ್ಟು ಮಾತ್ರ ಉಳಿದಿರುತ್ತೆ. ಹಾಗಾದರೆ ಏನು ಮನರಂಜನೆಯ ಅರ್ಥ? ಸುಖಾಂತದ ಕಥೆಗಳಷ್ಟೇ ಮನರಂಜನೆ ಎಂದಂತೂ ಯಾರೂ ಹೇಳುವುದಿಲ್ಲ. ದುರಂತ ಕಥೆಗಳನ್ನೂ ಅಷ್ಟೇ ಆಸ್ವಾದಿಸುತ್ತೇವೆ.

ಈ ಪ್ರಶ್ನೆಗಳಿಗೆ ಹಲವಾರು ಉತ್ತರಗಳಿರಬಹುದು; ನನಗೆ ನೆನಪಾಗುವುದು ಲಂಕೇಶ್ ಹೇಳುತ್ತಿದ್ದ ಪದ, ವಾಸನೆ. ಕೆಟ್ಟ ಸಿನೆಮಾಗಳ ವಾಸನೆ ಕೆಟ್ಟದಾಗಿರುತ್ತೆ, ಅವುಗಳ ವಾಸನೆ ಕಂಡುಹಿಡಿಯಲು ನಾವು ಚಿತ್ರ ನೋಡಲೇಬೇಕಂತಿಲ್ಲ, ಅದಕ್ಕೂ ಮುಂಚೆಯೇ ವಾಸನೆ ಹೊಡೆಯುತ್ತವೆ. ಒಳ್ಳೇ ಚಿತ್ರಗಳು ಅರ್ಥವಾಗದಿದ್ದರೂ ವಾಸನೆ ಚೆನ್ನಾಗಿತ್ತು ಎಂದರೆ ಸಂತೋಷಪಡುವ. ಸದ್ಯಕ್ಕೆ ವಾಸನೆಯೊಂದಿಗೆ ಮುಗಿಸುತ್ತೇನೆ; ಮುಂದೆ ನೋಡುವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...