Homeದಲಿತ್ ಫೈಲ್ಸ್‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಜೂನ್ 1ರಂದು ಅಕ್ಷಯ್ ಭಲೇರಾವ್ ಎಂಬ ದಲಿತ ಯುವಕನ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಅಕ್ಷಯ್ ಅವರ ಹಿರಿಯ ಸಹೋದರ ಆಕಾಶ್ ನೀಡಿರುವ ದೂರಿನ ಮೇರೆಗೆ ನಾಂದೇಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಸಹೋದರರಾದ ಅಕ್ಷಯ್ ಮತ್ತು ಆಕಾಶ್ ಅಂದು ಸಂಜೆ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿದ್ದಾಗ, ಅಕ್ಷಯ್ ಅವರಿಗೆ ಸವರ್ಣೀಯ ಜಾತಿಯ ಗುಂಪಿನ ಜನರು ಜಾತಿ ನಿಂದನೆ ಮಾಡಲಾರಂಭಿಸಿದರು, ನಂತರ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂದು ಮುಖ್ಯರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಮರಾಠಾ ಮದುಮಗನ ಮದುವೆಯ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಇದ್ದರು. ಡಿಜೆ ಮ್ಯೂಸಿಕ್‌ ಹಾಕಲಾಗಿತ್ತು. ಅರಚಾಡುತ್ತಾ ಕುಣಿಯುತ್ತಿದ್ದರು. ಮೆರವಣಿಗೆಯಲ್ಲಿದ್ದ ಕೆಲವು ಜನರು ಕತ್ತಿಗಳನ್ನು, ಕೋಲುಗಳನ್ನು ಝಳಪಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿರಾಣಿ ಅಂಗಡಿಯ ಬಳಿ ಅಕ್ಷಯ್ ಮತ್ತು ಆಕಾಶ್‌ ಅವರನ್ನು ಈ ಜಾತಿವಾದಿಗಳ ಗುಂಪು ಎದುರಾಗಿತ್ತು. ಅದರಲ್ಲಿದ್ದ ಒಬ್ಬಾತ ದಲಿತ ಸಹೋದರರಿಗೆ ಜಾತಿ ನಿಂದನೆ ಮಾಡಲು ಪ್ರಾರಂಭಿಸಿದನು. “ಇವರಿಬ್ಬರನ್ನು ಕೊಲ್ಲಬೇಕು, ಅಂಬೇಡ್ಕರ್‌ ಜಯಂತಿ ಆಚರಿಸಲು ಧೈರ್ಯ ಮಾಡ್ತೀರಾ?” ಎಂದನು.

ಇದಾದ ನಂತರ ದುಷ್ಕರ್ಮಿಗಳ ಗುಂಪು ಅಕ್ಷಯ್‌ ಮೇಲೆ ಮುಗಿ ಬಿದ್ದು ಒದೆಯಲು ಆರಂಭಿಸಿತು. ಕೋಲುಗಳಿಂದ ಥಳಿಸಿತು. ಒಬ್ಬಾತ ಪದೇ ಪದೇ ಕತ್ತಿಯಿಂದ ಹಲ್ಲೆ ಮಾಡಲಾರಂಭಿಸಿದ. ಇತರರು ಅಕ್ಷಯ್ ಅವರ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಹಿಡಿದರು. ಇದರಿಂದಾಗಿ ಅಕ್ಷಯ್‌ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳದಲ್ಲಿದ್ದ ಆಕಾಶ್ ಹಾಗೂ ಅವರ ತಾಯಿಗೂ ಥಳಿಸಿದ್ದಾರೆ. ಅವರಿಗೂ ಗಾಯಗಳಾಗಿವೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಸೆಕ್ಷನ್‌ 3(1)(ಆರ್‌), 3(1)(ಎಸ್‌), 3(2)(ವಿಎ), ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143, 147, 148, 149, 302, 307, 324, 323, 294 ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌  4, 25, 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತೋಷ್ ತಿಡ್ಕೆ, ದತ್ತ ತಿಡ್ಕೆ, ಕೃಷ್ಣ ತಿಡ್ಕೆ, ನೀಲಕಂಠ ತಿಡ್ಕೆ, ನಾರಾಯಣ ತಿಡ್ಕೆ, ಶಿವಾಜಿ ತಿಡ್ಕೆ, ಮಹಾದು ತಿಡ್ಕೆ, ಬಾಬುರಾವ್ ತಿಡ್ಕೆ ಮತ್ತು ಬಾಲಾಜಿ ಮುಂಗಲ್ ಅವರನ್ನು ಆರೋಪಿಗಳೆಂದು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಕ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಯುವ ಪ್ಯಾಂಥರ್‌ನ ಅಧ್ಯಕ್ಷ ರಾಹುಲ್ ಪ್ರಧಾನ್ ಪ್ರತಿಕ್ರಿಯಿಸಿ, “ಬೊಂಧರ್ ಗ್ರಾಮವು ಬೌದ್ಧ ನಿವಾಸಿಗಳ ವಿರುದ್ಧದ ಅಪರಾಧಗಳಿಗೆ ಕುಖ್ಯಾತವಾಗಿದೆ. ಪ್ರಬಲ ಮರಾಠ ಸಮುದಾಯದ ವಿರೋಧದಿಂದಾಗಿ ಕಳೆದ 40-45 ವರ್ಷಗಳಿಂದ ಗ್ರಾಮದಲ್ಲಿ ಬೌದ್ಧ ಸಮುದಾಯದವರು ಅಂಬೇಡ್ಕರ್ ಜಯಂತಿಯಂದು ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ‘ದಿ ಕ್ವಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ಬೊಂಧರ್ ಹವೇಲಿ ಗ್ರಾಮದಲ್ಲಿ ಶೇ.30ಕ್ಕಿಂತ ಹೆಚ್ಚು ದಲಿತರಿದ್ದಾರೆ.

ದಾಳಿಯ ಬಗ್ಗೆ ತಿಳಿದ ತಕ್ಷಣ ಗ್ರಾಮಕ್ಕೆ ಆಗಮಿಸಿದ ಪ್ರಧಾನ್, “ಈ ವರ್ಷ ಬೌದ್ಧರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ಕಾರಣಕ್ಕಾಗಿ ಮರಾಠರು ಆಕ್ರೋಶಗೊಂಡಿದ್ದಾರೆ. ಅಕ್ಷಯ್ ಅವರು ಅಂಬೇಡ್ಕರ್‌ ಜಯಂತಿ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...