Homeದಲಿತ್ ಫೈಲ್ಸ್‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಜೂನ್ 1ರಂದು ಅಕ್ಷಯ್ ಭಲೇರಾವ್ ಎಂಬ ದಲಿತ ಯುವಕನ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಅಕ್ಷಯ್ ಅವರ ಹಿರಿಯ ಸಹೋದರ ಆಕಾಶ್ ನೀಡಿರುವ ದೂರಿನ ಮೇರೆಗೆ ನಾಂದೇಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಸಹೋದರರಾದ ಅಕ್ಷಯ್ ಮತ್ತು ಆಕಾಶ್ ಅಂದು ಸಂಜೆ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿದ್ದಾಗ, ಅಕ್ಷಯ್ ಅವರಿಗೆ ಸವರ್ಣೀಯ ಜಾತಿಯ ಗುಂಪಿನ ಜನರು ಜಾತಿ ನಿಂದನೆ ಮಾಡಲಾರಂಭಿಸಿದರು, ನಂತರ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂದು ಮುಖ್ಯರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಮರಾಠಾ ಮದುಮಗನ ಮದುವೆಯ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಇದ್ದರು. ಡಿಜೆ ಮ್ಯೂಸಿಕ್‌ ಹಾಕಲಾಗಿತ್ತು. ಅರಚಾಡುತ್ತಾ ಕುಣಿಯುತ್ತಿದ್ದರು. ಮೆರವಣಿಗೆಯಲ್ಲಿದ್ದ ಕೆಲವು ಜನರು ಕತ್ತಿಗಳನ್ನು, ಕೋಲುಗಳನ್ನು ಝಳಪಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿರಾಣಿ ಅಂಗಡಿಯ ಬಳಿ ಅಕ್ಷಯ್ ಮತ್ತು ಆಕಾಶ್‌ ಅವರನ್ನು ಈ ಜಾತಿವಾದಿಗಳ ಗುಂಪು ಎದುರಾಗಿತ್ತು. ಅದರಲ್ಲಿದ್ದ ಒಬ್ಬಾತ ದಲಿತ ಸಹೋದರರಿಗೆ ಜಾತಿ ನಿಂದನೆ ಮಾಡಲು ಪ್ರಾರಂಭಿಸಿದನು. “ಇವರಿಬ್ಬರನ್ನು ಕೊಲ್ಲಬೇಕು, ಅಂಬೇಡ್ಕರ್‌ ಜಯಂತಿ ಆಚರಿಸಲು ಧೈರ್ಯ ಮಾಡ್ತೀರಾ?” ಎಂದನು.

ಇದಾದ ನಂತರ ದುಷ್ಕರ್ಮಿಗಳ ಗುಂಪು ಅಕ್ಷಯ್‌ ಮೇಲೆ ಮುಗಿ ಬಿದ್ದು ಒದೆಯಲು ಆರಂಭಿಸಿತು. ಕೋಲುಗಳಿಂದ ಥಳಿಸಿತು. ಒಬ್ಬಾತ ಪದೇ ಪದೇ ಕತ್ತಿಯಿಂದ ಹಲ್ಲೆ ಮಾಡಲಾರಂಭಿಸಿದ. ಇತರರು ಅಕ್ಷಯ್ ಅವರ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಹಿಡಿದರು. ಇದರಿಂದಾಗಿ ಅಕ್ಷಯ್‌ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳದಲ್ಲಿದ್ದ ಆಕಾಶ್ ಹಾಗೂ ಅವರ ತಾಯಿಗೂ ಥಳಿಸಿದ್ದಾರೆ. ಅವರಿಗೂ ಗಾಯಗಳಾಗಿವೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಸೆಕ್ಷನ್‌ 3(1)(ಆರ್‌), 3(1)(ಎಸ್‌), 3(2)(ವಿಎ), ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143, 147, 148, 149, 302, 307, 324, 323, 294 ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌  4, 25, 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತೋಷ್ ತಿಡ್ಕೆ, ದತ್ತ ತಿಡ್ಕೆ, ಕೃಷ್ಣ ತಿಡ್ಕೆ, ನೀಲಕಂಠ ತಿಡ್ಕೆ, ನಾರಾಯಣ ತಿಡ್ಕೆ, ಶಿವಾಜಿ ತಿಡ್ಕೆ, ಮಹಾದು ತಿಡ್ಕೆ, ಬಾಬುರಾವ್ ತಿಡ್ಕೆ ಮತ್ತು ಬಾಲಾಜಿ ಮುಂಗಲ್ ಅವರನ್ನು ಆರೋಪಿಗಳೆಂದು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಕ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಯುವ ಪ್ಯಾಂಥರ್‌ನ ಅಧ್ಯಕ್ಷ ರಾಹುಲ್ ಪ್ರಧಾನ್ ಪ್ರತಿಕ್ರಿಯಿಸಿ, “ಬೊಂಧರ್ ಗ್ರಾಮವು ಬೌದ್ಧ ನಿವಾಸಿಗಳ ವಿರುದ್ಧದ ಅಪರಾಧಗಳಿಗೆ ಕುಖ್ಯಾತವಾಗಿದೆ. ಪ್ರಬಲ ಮರಾಠ ಸಮುದಾಯದ ವಿರೋಧದಿಂದಾಗಿ ಕಳೆದ 40-45 ವರ್ಷಗಳಿಂದ ಗ್ರಾಮದಲ್ಲಿ ಬೌದ್ಧ ಸಮುದಾಯದವರು ಅಂಬೇಡ್ಕರ್ ಜಯಂತಿಯಂದು ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ‘ದಿ ಕ್ವಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ಬೊಂಧರ್ ಹವೇಲಿ ಗ್ರಾಮದಲ್ಲಿ ಶೇ.30ಕ್ಕಿಂತ ಹೆಚ್ಚು ದಲಿತರಿದ್ದಾರೆ.

ದಾಳಿಯ ಬಗ್ಗೆ ತಿಳಿದ ತಕ್ಷಣ ಗ್ರಾಮಕ್ಕೆ ಆಗಮಿಸಿದ ಪ್ರಧಾನ್, “ಈ ವರ್ಷ ಬೌದ್ಧರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ಕಾರಣಕ್ಕಾಗಿ ಮರಾಠರು ಆಕ್ರೋಶಗೊಂಡಿದ್ದಾರೆ. ಅಕ್ಷಯ್ ಅವರು ಅಂಬೇಡ್ಕರ್‌ ಜಯಂತಿ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...