Homeದಲಿತ್ ಫೈಲ್ಸ್‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಜೂನ್ 1ರಂದು ಅಕ್ಷಯ್ ಭಲೇರಾವ್ ಎಂಬ ದಲಿತ ಯುವಕನ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಅಕ್ಷಯ್ ಅವರ ಹಿರಿಯ ಸಹೋದರ ಆಕಾಶ್ ನೀಡಿರುವ ದೂರಿನ ಮೇರೆಗೆ ನಾಂದೇಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಸಹೋದರರಾದ ಅಕ್ಷಯ್ ಮತ್ತು ಆಕಾಶ್ ಅಂದು ಸಂಜೆ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿದ್ದಾಗ, ಅಕ್ಷಯ್ ಅವರಿಗೆ ಸವರ್ಣೀಯ ಜಾತಿಯ ಗುಂಪಿನ ಜನರು ಜಾತಿ ನಿಂದನೆ ಮಾಡಲಾರಂಭಿಸಿದರು, ನಂತರ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂದು ಮುಖ್ಯರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಮರಾಠಾ ಮದುಮಗನ ಮದುವೆಯ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಇದ್ದರು. ಡಿಜೆ ಮ್ಯೂಸಿಕ್‌ ಹಾಕಲಾಗಿತ್ತು. ಅರಚಾಡುತ್ತಾ ಕುಣಿಯುತ್ತಿದ್ದರು. ಮೆರವಣಿಗೆಯಲ್ಲಿದ್ದ ಕೆಲವು ಜನರು ಕತ್ತಿಗಳನ್ನು, ಕೋಲುಗಳನ್ನು ಝಳಪಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿರಾಣಿ ಅಂಗಡಿಯ ಬಳಿ ಅಕ್ಷಯ್ ಮತ್ತು ಆಕಾಶ್‌ ಅವರನ್ನು ಈ ಜಾತಿವಾದಿಗಳ ಗುಂಪು ಎದುರಾಗಿತ್ತು. ಅದರಲ್ಲಿದ್ದ ಒಬ್ಬಾತ ದಲಿತ ಸಹೋದರರಿಗೆ ಜಾತಿ ನಿಂದನೆ ಮಾಡಲು ಪ್ರಾರಂಭಿಸಿದನು. “ಇವರಿಬ್ಬರನ್ನು ಕೊಲ್ಲಬೇಕು, ಅಂಬೇಡ್ಕರ್‌ ಜಯಂತಿ ಆಚರಿಸಲು ಧೈರ್ಯ ಮಾಡ್ತೀರಾ?” ಎಂದನು.

ಇದಾದ ನಂತರ ದುಷ್ಕರ್ಮಿಗಳ ಗುಂಪು ಅಕ್ಷಯ್‌ ಮೇಲೆ ಮುಗಿ ಬಿದ್ದು ಒದೆಯಲು ಆರಂಭಿಸಿತು. ಕೋಲುಗಳಿಂದ ಥಳಿಸಿತು. ಒಬ್ಬಾತ ಪದೇ ಪದೇ ಕತ್ತಿಯಿಂದ ಹಲ್ಲೆ ಮಾಡಲಾರಂಭಿಸಿದ. ಇತರರು ಅಕ್ಷಯ್ ಅವರ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಹಿಡಿದರು. ಇದರಿಂದಾಗಿ ಅಕ್ಷಯ್‌ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳದಲ್ಲಿದ್ದ ಆಕಾಶ್ ಹಾಗೂ ಅವರ ತಾಯಿಗೂ ಥಳಿಸಿದ್ದಾರೆ. ಅವರಿಗೂ ಗಾಯಗಳಾಗಿವೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಸೆಕ್ಷನ್‌ 3(1)(ಆರ್‌), 3(1)(ಎಸ್‌), 3(2)(ವಿಎ), ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143, 147, 148, 149, 302, 307, 324, 323, 294 ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌  4, 25, 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತೋಷ್ ತಿಡ್ಕೆ, ದತ್ತ ತಿಡ್ಕೆ, ಕೃಷ್ಣ ತಿಡ್ಕೆ, ನೀಲಕಂಠ ತಿಡ್ಕೆ, ನಾರಾಯಣ ತಿಡ್ಕೆ, ಶಿವಾಜಿ ತಿಡ್ಕೆ, ಮಹಾದು ತಿಡ್ಕೆ, ಬಾಬುರಾವ್ ತಿಡ್ಕೆ ಮತ್ತು ಬಾಲಾಜಿ ಮುಂಗಲ್ ಅವರನ್ನು ಆರೋಪಿಗಳೆಂದು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಕ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಯುವ ಪ್ಯಾಂಥರ್‌ನ ಅಧ್ಯಕ್ಷ ರಾಹುಲ್ ಪ್ರಧಾನ್ ಪ್ರತಿಕ್ರಿಯಿಸಿ, “ಬೊಂಧರ್ ಗ್ರಾಮವು ಬೌದ್ಧ ನಿವಾಸಿಗಳ ವಿರುದ್ಧದ ಅಪರಾಧಗಳಿಗೆ ಕುಖ್ಯಾತವಾಗಿದೆ. ಪ್ರಬಲ ಮರಾಠ ಸಮುದಾಯದ ವಿರೋಧದಿಂದಾಗಿ ಕಳೆದ 40-45 ವರ್ಷಗಳಿಂದ ಗ್ರಾಮದಲ್ಲಿ ಬೌದ್ಧ ಸಮುದಾಯದವರು ಅಂಬೇಡ್ಕರ್ ಜಯಂತಿಯಂದು ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ‘ದಿ ಕ್ವಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ಬೊಂಧರ್ ಹವೇಲಿ ಗ್ರಾಮದಲ್ಲಿ ಶೇ.30ಕ್ಕಿಂತ ಹೆಚ್ಚು ದಲಿತರಿದ್ದಾರೆ.

ದಾಳಿಯ ಬಗ್ಗೆ ತಿಳಿದ ತಕ್ಷಣ ಗ್ರಾಮಕ್ಕೆ ಆಗಮಿಸಿದ ಪ್ರಧಾನ್, “ಈ ವರ್ಷ ಬೌದ್ಧರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ಕಾರಣಕ್ಕಾಗಿ ಮರಾಠರು ಆಕ್ರೋಶಗೊಂಡಿದ್ದಾರೆ. ಅಕ್ಷಯ್ ಅವರು ಅಂಬೇಡ್ಕರ್‌ ಜಯಂತಿ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...